ಭಾನುವಾರ , ಏಪ್ರಿಲ್ 28 2024
kn
Breaking News

Monthly Archives: ಜುಲೈ 2022

ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ: ಜಾರಕಿಹೊಳಿ

ಮೂಡಲಗಿ: ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ, ಸ್ವ-ಸಹಾಯ ಸಂಘಗಳನ್ನು ಕಿರು ಉದ್ಯಮಿಗಳನ್ನಾಗಿಸುವ ಅಮೃತ ಯೋಜನೆ ಅಡಿ ೪೫ ಸಂಘಗಳಿಗೆ ತಲಾ ಒಂದು ಲಕ್ಷ ರೂ ಗಳಂತೆ ಸಹಾಯ ಧನವನ್ನು ನೀಡಲಾಗುತ್ತಿದ್ದು, ಈ ಸಹಾಯ ಧನವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸುವಂತೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಸಂಘಗಳಿಗೆ ಕರೆ ನೀಡಿದರು. ಬುಧವಾರದಂದು ಪಟ್ಟಣದ ಗುಡ್ಲಮಡ್ಡಿ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಪದಗ್ರಹಣ ಸಮಾಜ ಸೇವೆಯಲ್ಲಿ ನಿಸ್ವಾರ್ಥತೆ ಇರಲಿ : ಮಠಪತಿ

ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಶರಣ ಐ.ಆರ್. ಮಠಪತಿ ಹೇಳಿದರು. ಇಲ್ಲಿಯ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೨೦೨೨-೨೩ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಗೆ ನಿತ್ಯ ಸಾಕಷ್ಟು ಅವಕಾಶಗಳಿದ್ದು, ಪ್ರತಿಯೊಬ್ಬರಲ್ಲಿ ಸಮಾಜ ಸೇವೆ ಮಾಡುವ ಇಚ್ಛಾಶಕ್ತಿ ಇರಬೇಕು ಎಂದರು. ಮೂಡಲಗಿ ಲಯನ್ಸ್ ಕ್ಲಬ್‌ದವರು …

Read More »

ಟ್ರಾನ್ಸ್ ಫಾರ್ಮರ್ ಸ್ಥಳಾಂತರಕ್ಕೆ ನಂದಗಾಂವಿಮಠ ಆಗ್ರಹ

ಮೂಡಲಗಿ – ನಗರದ ಬಾಜಿ ಮಾರ್ಕೆಟ್ ನಲ್ಲಿ ಆಯ್ ಡಿ ಎಸ್ ಎಮ್ ಟಿ ಯೋಜನೆಯ ವ್ಯಾಪಾರಿ ಮಳಿಗೆಗಳ ಕೊನೆಯ ಮಳಿಗೆಯ ಹತ್ತಿರ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸಮಾಜ ಸೇವಕ ಮಹಾಲಿಂಗಯ್ಯ ನಂದಗಾಂವಿಮಠ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಈ ಟಿ ಸಿ ಇದ್ದು ಯಾವುದೇ ಸಮಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಕೂಡಲೇ ಟಿ ಸಿ ಯನ್ನು ಬೇರೆ ಕಡೆಗೆ …

Read More »

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಗೆ ಉಳಿದ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಅದೃಶಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿರುವರು. ಬೈಲಹೊಂಗಲ ಉಪವಿಭಾಗದ ಎಆರ್‌ಸಿಎಸ್ ಶಾಹೀನ್ ಅಖ್ತರ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿವರ್ಹಹಿಸಿ ಚಂದ್ರಶೇಖರ ಗಾಣಿಗೇರ ಅವರ ಆಯ್ಕೆಯನ್ನು ಘೋಷಣೆ ಮಾಡಿರುವರು. ಸೊಸೈಟಿಯ ನಿರ್ದೇಶಕರಾದ ಕಲ್ಲಪ್ಪ ಕಮತಿ, ಮುರಿಗೆಪ್ಪ ಪಾಟೀಲ, ಮಾರುತಿ ದೇವನಗಳ, ರುದ್ರಪ್ಪ ಹಟ್ಟಿ, ಡಾ. ಬಸವರಾಜ ಮದಬಾವಿ, ಗಿರಿಜಾ …

Read More »

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಪಾಡುರಂಗ ವಿಠ್ಠಲನ ಭಕ್ತನಾಗಿ ಶ್ರೀನಿವಾಸ್ ಗೊಡ್ಯಾಗೋಳ

ಮೂಡಲಗಿ: ಆಷಾಡ ಏಕಾದಶಿ ಪ್ರಯುಕ್ತ ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಸುಪುತ್ರ ಶ್ರೀನಿವಾಸ್ ಗೊಡ್ಯಾಗೋಳ ಪಾಡುರಂಗ ವಿಠ್ಠಲನ ಭಕ್ತನಾಗಿ ಗಮನ ಸೆಳೆದು ಪಂಡರಿನಾಥನ ಕೃಪೆ ಪಡೆದು ಪ್ರಶಂಸೆಗೆ ಪಾತ್ರನಾಗಿದ್ದಾನೆ.

Read More »

ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ : ಬಿಇಓ ಅಜಿತ್ ಮನ್ನಿಕೇರಿ

ಮೂಡಲಗಿ : ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ. ಖಾಸಗಿ ಶಾಲೆಗಳ ವಾಹನ ಸೌಕರ್ಯಗಳು ಸುಲಭ ಹಾಗೂ ಸರಕ್ಷೀತವಾಗಿದ್ದರೆ ಪಾಲಕರಿಗೆ ಹಾಗೂ ಕಲಿಕೆಯಲ್ಲಿ ಶಿಕ್ಷಕರಿಗೆ ಅನುಕೂಲವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರ ಪಟ್ಟಣದ ಆರ್.ಡಿ. ಪದವಿ ಪೂರ್ವ ಕಾಲೇಜಿನಲ್ಲಿ ಬಿಇಒ ಕಾರ್ಯಾಲಯದಿಂದ ಆಯೋಜಿಸಿದ್ದ ತಾಲೂಕಾ ಮಟ್ಟದ ಖಾಸಗಿ ಶಾಲಾ ವಾಹನ ಚಾಲಕರ ಮತ್ತು ನಿರ್ವಾಹಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ವಾಹನ …

Read More »

ಕಾಯಕ, ಕರ್ತವ್ಯ ಮತ್ತು ಕೆಲಸದಲ್ಲಿ ಮನುಷ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಸುಖಮಯ ಜೀವನ ನಡೆಸಲು ಸಾಧ್ಯ : ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ

ಮೂಡಲಗಿ: ಕಾಯಕ, ಕರ್ತವ್ಯ ಮತ್ತು ಕೆಲಸದಲ್ಲಿ ಮನುಷ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಸುಖಮಯ ಜೀವನ ನಡೆಸಲು ಸಾಧ್ಯ, ಝಂಡೆಕುರಬರ ಸಮಾಜದವರು ಧರ್ಮ ಮತ್ತು ಒಳ್ಳೇಯ ಕಾರ್ಯ ಮಾಡುತ್ತಿರುವದರಿಂದ ಯಾರಿಗೂ ಕೊರೋನಾ ಬಂದಿಲ್ಲ, ಎಲ್ಲರೂ ವೆಂಕಟೇಶ್ವರರ ನಾಮಸ್ಮರಣೆಯಿಂದ ಸುಖಮಯ ಜೀವನ ಸಾಗಿಸುತ್ತಿರುವುದು ಸಂತೋಷದ ಸಂಗತಿ ಎಂದು ಮುಕ್ತಿ ಮಠದ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ವೆಂಕಟೇಶ್ವರ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಕಾರ್ಯಕ್ರಮದ ಸಮಾರಂಭದಲ್ಲಿ ಭಾಗವಹಿಸಿ …

Read More »

ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ:ಬೀರಪ್ಪ ಅಂಡಗಿ

ಕೊಪ್ಪಳ: ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು. ಅವರು ನಗರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿಗೆ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಶ್ರೀನಿವಾಸ ಚಿತ್ರಗಾರ ಅವರಿಗೆ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಅಥಿಗಳಾಗಿ ಆಗಮಿಸಿ ಮಾತನಾಡುತ್ತಾ,ಪ್ರತಿಯೊಬ್ಬರು ತಮಗೆ ವಹಿಸಲಾದ ಹುದ್ದೆಗೆ ಅನುಗುಣವಾಗಿ ಕೆಲಸ ಮಾಡಿದಾಗ ಮಾತ್ರ …

Read More »

ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ : ಭೀಮಪ್ಪ ಗಡಾಡ

ಮೂಡಲಗಿ: ಕರ್ನಾಟಕ ಸರ್ಕಾರದ ಒಡೆತನಕ್ಕೆ ಸೇರಿರುವ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳಾಗಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ವಿ.ಪಿ ನೌಕರರಿಗೆ ಮುಂಬರುವ ಅಧಿವೇಶದ ಒಳಗಾಗಿ ಮೀಟರ್ ರೀಡರ್ (ಎಮ್.ಆರ್) ನೇಮಕ ಮಾಡದಿದ್ದಲ್ಲಿ ವಿಧಾಸೌದದ ಮುಂದೆ ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದೆಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾಡ ಹೇಳಿದರು. ಶನಿವಾರದಂದು ಪಟ್ಟಣದ ಸಮರ್ಥ ಶಾಲಾ ಸಭಾಂಗಣದಲ್ಲಿ ಗ್ರಾಮ ವಿದ್ಯುತ್ …

Read More »

You cannot copy content of this page