ಬುಧವಾರ , ಮೇ 31 2023
kn
Breaking News

ಮಾನವನ ದೇಹದ ಉಷ್ಣತೆಯ ಕಂಡುಹಿಡಿಯೋ ಸ್ಕ್ರೀನಿಂಗ್ ಮಿಷನ್ ಬಂದ್

Spread the love

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕಿಂಗ್ ಸ್ಕ್ರೀನಿಂಗ್ ಮಿಷನಿಂದ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.

ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ, ಇದರ ಮಧ್ಯ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ, ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ.

ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು ಭಯಬೀತರಾಗಿದ್ದರು. ಎಸಿ ಕಾಲೋನಿಯ ನಿವಾಸಿಗಳು ಅಂತು ಒಂದು ಕ್ಷಣ ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ,

ಇದನ್ನು ಅರಿತ ಸ್ಥಳೀಯರು ಕೂಡಲೇ ಆರೋಗ್ಯ ಇಲಾಖೆಗೆ ಕರೆ ಮಾಡಿದ್ದಾರೆ. ಆದರೆ ನಿಗದಿತ ಸಮಯಕ್ಕೆ ಬಾರದೆ ವಿಳಂಬ ಮಾಡಿದಕ್ಕೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮೂಲದ ಶಂಕಿತರನ್ನು ಸ್ಕ್ರೀನಿಂಗ್ ಮಿಷಿನ್ ಮೂಲಕ ಚೆಕ್ ಮಾಡೋಕೆ ಹೋದ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷನ್ ಕೈಕೊಟ್ಟಿದ್ದು, ಘಟನೆ ಬೆಳಗಾವಿ ಜಿಲ್ಲೆಯ ಕಕಮರಿ ಗ್ರಾಮದಲ್ಲಿ ನಡೆದಿದೆ, ಇದನ್ನರಿತ ಮಹಾರಾಷ್ಟ್ರ ಮೂಲದವರು ಗ್ರಾಮದಿಂದ ಕಾಲ್ಕಿತ್ತಿದ್ದಾರೆ.

ಹಿಂತ ಸಂದಿಗ್ಧ ಪರಿಸ್ಥಿತಿಯಲ್ಲೂ ಆರೋಗ್ಯ ಇಲಾಖೆಯ ವೈದ್ಯಕೀಯ ಉಪಕರಣಗಳು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ, ಹೇಗೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page