ಶನಿವಾರ , ಮೇ 18 2024
kn
Breaking News

gcsteam

ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …

Read More »

ವಕೀಲ ವೃತ್ತಿಯನ್ನು ಅತ್ಯಂತ ಘನತೆವೆತ್ತ ವೃತ್ತಿ, ಅನ್ಯಾಯವನ್ನು ತೊಲಗಿಸಿ ನ್ಯಾಯವನ್ನು ಪ್ರತಿಷ್ಠಾಪಿಸುವ ಮೂಲಗುರಿ ಹೊಂದಿದೆ : ನ್ಯಾಯಾಧಿಶ ಸುರೇಶ ಎಸ್.ಎನ್.

ಮೂಡಲಗಿ : ವಕೀಲ ವೃತ್ತಿಯನ್ನು ಅತ್ಯಂತ ಘನತೆವೆತ್ತ ವೃತ್ತಿ ಎಂದು ಪರಿಗಣಿಸಲಾಗಿದೆ ಏಂಕೆದರೆ ಈ ವೃತ್ತಿಯೊಂದು ಅನ್ಯಾಯವನ್ನು ತೊಲಗಿಸಿ ನ್ಯಾಯವನ್ನು ಪ್ರತಿಷ್ಠಾಪಿಸುವ ಮೂಲಗುರಿ ಹೊಂದಿದೆ ಎಂದು ನ್ಯಾಯಾಧಿಶರಾದ ಸುರೇಶ ಎಸ್.ಎನ್. ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದಲ್ಲಿ ಆಯೋಜಿಸಿದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿ ವಕೀಲರ ಮೇಲೆ ಸಮಾಜದಲ್ಲಿ ಗುರುತರ ಹೊಣೆಗಾರಿಕೆ ಇದೆ. ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ವಕೀಲರು ಕಾನೂನು ವಿಷಯಗಳಲ್ಲಿ ಪ್ರಾವಿಣ್ಯತೆ ಹೊಂದಿದರೆ …

Read More »

ಡಾ. ಅಂಬೇಡ್ಕರ ತತ್ವ, ಸಿದ್ಧಾಂತಗಳನ್ನು ಅರಿಯಬೇಕು: ಡಾ. ಮಹದೇವ ಪೋತರಾಜ

ಮೂಡಲಗಿ: ‘ಭಾರತದಲ್ಲಿ ಸಮಾನತೆ ಮತ್ತು ಅಸ್ಪøಶ್ಯತೆಯನ್ನು ಹೋಗಲಾಡಿಸಿದ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್’ ಎಂದು ಡಾ. ಮಹಾದೇವ ಪೋತರಾಜ ಹೇಳಿದರು. ಇಲ್ಲಿಯ ಮಾನವ ಬಂಧುತ್ವ ವೇದಿಕೆ, ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕ ತರಬೇತಿ ಕೇಂದ್ರ ಹಾಗೂ ಜೈ ಭೀಮ ಯುವಕರ ಸಂಘ ಇವರ ಸಂಯಕ್ತ ಆಶ್ರಯದಲ್ಲಿ ಸ್ಥಳೀಯ ರುದ್ರಭೂಮಿಯಲ್ಲಿ ಆಚರಿಸಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ, ಮೌಢ್ಯ ವಿರೋದಿ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಸಂಘಟಕರು …

Read More »

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ತತ್ವಾದರ್ಶಗಳು ಜೀವನ ಶೈಲಿ ಮಾದರಿಯಾಗಿದೆ: ರಮೇಶ ಸಣ್ಣಕ್ಕಿ

ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡೆಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ …

Read More »

ಬಚ್ಚಲು ಗುಂಡಿ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ

ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬಚ್ಚಲು ಗುಂಡಿ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನರೇಗಾ ಯೋಜನೆಯಡಿ ನಿರ್ಮಿಸಲಾಗುವ ಬಚ್ಚಲು ಗುಂಡಿಯಿಂದ ಗ್ರಾಮದ ಸೌಂದರ್ಯ ಹೆಚ್ಚುತ್ತದೆ. ಅನೇಕ ರೋಗ ರುಜಿನಗಳನ್ನು …

Read More »

ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಠ ಸ್ಥಾನವಿದೆ:ನ್ಯಾಯವಾದಿ ಮಲ್ಲಾಪೂರ

ಮೂಡಲಗಿ: ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ ಕನ್ನಡ ಜನಮಾನಸದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದು ಪ್ರತಿಭೆಗೆ ಜಾತಿ ಬೇಧವಿಲ್ಲ ಕನ್ನಡ ಶಬ್ದಗಳಲ್ಲಿರುವ ಸಹಜನಾದವನ್ನು ಅರ್ಥಮಾಡಿಕೊಂಡ ಎಲ್ಲರಿಗೂ ಇಷ್ಟವಾಗುವಂತೆ ದೇವರ ನಾಮಗಳನ್ನು ರಚಿಸಬಲ್ಲ ಪ್ರತಿಭೆ ಕನಕದಾಸರಲ್ಲಿತ್ತು ಎಂದು ನ್ಯಾಯವಾದಿ ಪಿ.ಎಸ್.ಮಲ್ಲಾಪೂರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ, ಕೈಯಲ್ಲಿ ತಾಳ ತಂಬೂರಿಗಳನ್ನು ಹಿಡಿದುಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿಕೊಂಡು …

Read More »

ಉಪ ಚುನಾವಣೆಯಲ್ಲಿ ದೊಡ್ಡ ಮೊತ್ತದ ಹಣ: ವಿಧಾನ ಪರಿಷತ್ ಸದಸ್ಯ ವಿಶ್ವನಾಥ ಹೇಳಿಕೆ ತನಿಖೆಗೆ ಸಿಬಿಐ ಮತ್ತು ಚುನಾವಣಾಧಿಕಾರಿಗಳಿಗೆ ದೂರು : ಭೀಮಪ್ಪ ಗಡಾಡ

ಮೂಡಲಗಿ: ಉಪ ಚುನಾವಣೆಯ ಖರ್ಚಿಗಾಗಿ ಪಕ್ಷ ನನಗೆ ಕಳುಹಿಸಿದ್ದ ದೊಡ್ಡ ಪ್ರಮಾಣದ ಮೊತ್ತದ ಹಣವನ್ನು ಯೋಗೇಶ್ವರ ಮತ್ತು ಮುಖ್ಯ ಮಂತ್ರಿಗಳ ಆಪ್ತ ಸಂತೋಷ ಅವರೇ ಲಪಟಾಯಿಸಿದರು ಎಂದು ಬಿಜೆಪಿ ಪಕ್ಷದ ವಿದಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥವರು ಇತ್ತೀಚೆಗೆ ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಯ ಕುರಿತು ಸಮಗ್ರ ತನಿಖೆ ನೆಡಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಹಾಗೂ ಕೇಂದ್ರಿಯ ತನಿಖಾದಳ (ಸಿಬಿಐ)ಗೆ ದೂರು ಸಲ್ಲಿಸಲಾಗಿದೆ ಎಂದು ಉತ್ತರ ಕರ್ನಾಟಕ ಹೋರಾಟ ಸಮೀತಿ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು 1 …

Read More »

ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ …

Read More »

You cannot copy content of this page