ಶುಕ್ರವಾರ , ಏಪ್ರಿಲ್ 26 2024
kn
Breaking News

ಅಂತರಾಷ್ಟ್ರೀಯ

ಆರೋಗ್ಯವಂತ ವ್ಯಕ್ತಿಗಳಿಗೆ ಕೊರೋನಾ ಸೋಂಕು ಇದೆ ಎಂದು ವರದಿ ನೀಡಿದ ಆರೋಗ್ಯ ಇಲಾಖೆಯ ಸಿಬ್ಬಂದಿ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುರೇಬಾನ ಸಮೀಪದ ಕೊಳಚಿ ಗ್ರಾಮದಲ್ಲಿ ಈ ಯಡವಟ್ಟು ನಡೆದಿದ್ದೆ. ?ವಿಡಿಯೋ ನೋಡಿ. ಆರೋಗ್ಯವಂತ ವ್ಯಕ್ತಿಗಳಿಗೆ ಕೊರೋನಾ ಸೋಂಕು ಇದೆ ಎಂದು ವರದಿ ನೀಡಿದ ಆರೋಗ್ಯ ಇಲಾಖೆ ಸಿಬ್ಬಂದಿಯ ಯಡವಟ್ಟಿನ ವಿರುದ್ಧ ಕೊಳಚಿ ಗ್ರಾಮದ ಜನರು ಶುಕ್ರವಾರ ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಕೊಳಚಿ ಗ್ರಾಮದಲ್ಲಿ ಗುರುವಾರ 20 ಕೊರೋನಾ ಪಾಸಿಟಿವ್ ಪತ್ತೆ ಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿತ್ತು. ಆದರೆ ಇಲಾಖೆ …

Read More »

ಗುರ್ಲಾಪೂರದ ಅಯ್ಯಪ್ಪನಿಗೆ ಮಹಾಪೊಜೆ

ಗುರ್ಲಾಪೂರ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಶುಕ್ರವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ನಡೆಯವದು ಶುಕ್ರವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನಿದಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು. ಸಂಜೆ 5 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು …

Read More »

ಮೂಡಲಗಿಯಲ್ಲಿ ಕೊರೋನಾ ಸೋಂಕಿತೆ ಪತ್ತೆ: ಖಾಸಗಿ ಆಸ್ಪತ್ರೆ, ಪೆಟ್ರೊಲ್ ಪಂಪ್ ಸೀಲ್-ಡೌನ್…!

ಮೂಡಲಗಿ: ಕೊರೋನಾ ಸೋಂಕಿತರಿಲ್ಲದೆ, ಸುಮಾರು ದಿನಗಳಿಂದ ಸದ್ದಿಲ್ಲದೆ ಶಾಂತವಾಗಿದ್ದ ಮೂಡಲಗಿ ಪಟ್ಟಣವು ಇಂದು ಅಸ್ತವ್ಯಸ್ತವಾಗುವ ಸನ್ನಿವೇಶ ಎದುರಾಗಿದೆ. ಏಕೆಂದರೆ ಮೂಡಲಗಿ ಪಟ್ಟಣದ ತಳವಾರ ಓಣಿಯಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆಯೆಂದು ಮೂಡಲಗಿ ತಾಲೂಕಿನ ತಹಶಿಲ್ದಾರ ಮಹಾತರವರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ 38 ವರ್ಷದ ಮಹಿಳೆಯಲ್ಲಿ ಇಂದು ಕೋರೊನಾ ಸೋಂಕು ಇರೋದು ದೃಡವಾಗಿದೆ. ನಿನ್ನೆ ಪಟ್ಟಣದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಮಹಿಳೆಗೆ ರೋಗ …

Read More »

ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೆವಾಡಿ ಸೂಕ್ತ ಸ್ಥಳ: ಸಂಸದ ಸುರೇಶ್ ಅಂಗಡಿ

ಬೆಳಗಾವಿ: ಜಿಲ್ಲೆಯ ಭೂತರಾಮಹಟ್ಟಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳು ಕಾರ್ಯನಿರ್ವಹಿಸಲು ಸ್ಥಳದ ಕೊರತೆಯಾಗಿರುವ ಹಿನ್ನೆಲೆಯಲ್ಲಿ, ಇಂದು ಬೆಳಗಾವಿ ತಾಲೂಕಿನ ಬೆಂಡಿಗೇರಿ, ಹಾಲಗಿಮರಡಿ ಮತ್ತು ಹಿರೇಬಾಗೇವಾಡಿ ಗ್ರಾಮಗಳಿಗೆ ವಿವಿ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಊರಿನ ಪ್ರಮುಖರೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ವಿವಿಯ ವೈಸ್ ಚಾನ್ಸಲರ್ ಪ್ರೊ. ರಾಮಚಂದ್ರಗೌಡ, ರೆಜಿಸ್ಟರ್ ಪ್ರೊ. ಬಸವರಾಜ ಪಿ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. …

Read More »

ಜಯ ಕರ್ನಾಟಕ ಅಧ್ಯಕ್ಷ, ಮಾಜಿ ಭೂಗತ ಜಗತ್ತಿನ ದೊರೆ ಮುತ್ತಪ್ಪ ರೈ ಇನ್ನಿಲ್ಲ

ಜಯ ಕರ್ನಾಟಕ ಸಂಘಟನೆಯ ಸ್ಥಾಪಕ, ಮಾಜಿ ಭೂಗತ ದೊರೆ ಮುತ್ತಪ್ಪ ರೈ (68) ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಲಿವರ್ ಹಾಗೂ ಮೆದುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಗುರುವಾರ ತಡರಾತ್ರಿ 2 ಗಂಟೆ ಹೊತ್ತಿಗೆ  ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮುತ್ತಪ್ಪ ರೈ ನಿಧನರಾಗಿದ್ದಾರೆಂಬ ಸುದ್ದಿ ಬುಧವಾರ ರಾತ್ರಿಯೇ ಹರಡಿತ್ತು. ಆದರೆ ಆಸ್ಪತ್ರೆ ರೈ ನಿಧನವನ್ನು ಅಧಿಕೃತವಾಗಿ ಪ್ರಕಟಿಸಿರಲಿಲ್ಲ. ಪುತ್ತೂರಿನ  ಮುತ್ತಪ್ಪ ರೈ ಕಳೆದ ಏಪ್ರಿಲ್ 28ರಂದು …

Read More »

ಕೊರೊನಾ ವಾರಿಯರ‍್ಸಗೆ ಅಭಾಜಿ ಪೌಂಡೇಶನ್ ವತಿಯಿಂದ ಸನ್ಮಾನ

ಮುಗಳಖೋಡ: ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡ ಪಟ್ಟಣದಲ್ಲಿ ಡಾ.ಸಿ.ಬಿ.ಕುಲಿಗೋಡ ಅವರ ನಿವಾಸದಲ್ಲಿ ರಾಯಬಾಗದ ಅಭಾಜಿ ಪೌಂಡೇಶನ್ ವತಿಯಿಂದ ಕೊರೊನಾ ವಾರಿರ‍್ಸಗೆ ಹಮ್ಮಿಕೊಂಡ ಸತ್ಕಾರ ಸಮಾರಂಭದ ನೇತೃತ್ವವಹಿಸಿ ಮಾತನಾಡಿದ  ಡಾ.ಸಿ.ಬಿ.ಕುಲಿಗೋಡ ಈಗಾಗಲೇ ಸಾಕಷ್ಟು ಕುಟುಂಬಗಳಿಗೆ ಕಲ್ಲಗಂಡಿ, ಆಹಾರ ಸಾಮಗ್ರಿಗಳನ್ನು ಹಂಚಿ ನಮ್ಮ ಕೈಲಾದ ಸಹಾಯವನ್ನು ಮಾಡಿದ್ದೇವೆ. ಅದರೊಂದಿಗೆ ಇಂದು ಆಶಾ ಕಾರ್ಯಕರ್ತರಿಯರಿಗೆ ಆಹಾರ ಸಾಮಗ್ರಿಗಳ ಕಿಟ್‌ನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಪ್ರಪಂಚವನ್ನೇ ಬೆಚ್ಚಿಳಿಸಿರುವ ಕಿಲ್ಲರ ಕೊರೊನಾ ರೋಗ ದಿನದಿಂದ ದಿನಕ್ಕೆ ದೇಶದಲ್ಲಿ …

Read More »

ಬಾಲಚಂದ್ರ ಜಾರಕಿಹೊಳಿ ಅರಬಾಂವಿ ಕ್ಷೇತ್ರದ ಅನ್ನದಾತರಾಗಿದ್ದಾರೆ: ಜಿ. ಪಂ.ಸದಸ್ಯೆ ತೇರದಾಳ

ಮೂಡಲಗಿ: ಅರಬಾಂವಿ ಕ್ಷೇತ್ರದ ಜನತೆಯ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ 86ಸಾವಿರ ಅಹಾರ ಸಾಮಗ್ರಿಗಳ ಕಿಟ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅರಬಾಂವಿ ಕ್ಷೇತ್ರದ ಅನ್ನದಾತರಾಗಿದ್ದಾರೆ ಎಂದು ಹಳ್ಳೂರ ಜಿ.ಪಂ.ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಸೋಮವಾರ ಸಾಯಂಕಾಲ ಹಳ್ಳೂರ ಗ್ರಾಮದ ತಮ್ಮ ನಿವಾಸದಲ್ಲಿ ಜಾಣಪದ ಜಾಣ ಶಬ್ಬೀರ ಡಾಂಗೆ ರಚಿಸಿ ಹಾಡಿದ “ಮಂದಿಯ ಕಷ್ಟ ನೋಡ್ಯಾರ, ಎನ್ ಚಂದ ಸಂತಿ ಮಾಡ್ಯಾರ” ಎಂಬ ಜಾನಪದ ಹಾಡಿನ ವಿಡಿಯೊ ಸಿ.ಡಿ.ಬಿಡುಗಡೆಯ ಸರಳ ಸಮಾರಂಭದ …

Read More »

ಸೈನಿಕರನ್ನು ನಿರ್ಮಿಸುವುದರ ಜೊತೆಗೆ ಸಮಾಜಮುಖಿ ಕೆಲಸ ಮಾಡುತ್ತಿದೆ: ಕರುನಾಡು ಸೈನಿಕ ಕೇಂದ್ರ

ಮೂಡಲಗಿ: ಅದ್ಧೂರಿಯಾಗಿ ನಡೆಯಬೇಕಿದ್ದ ಈ ಸಂಸ್ಥೆಯ 2ನೇ ವರ್ಷಾಚರಣೆÉ ಮಹಾಮಾರಿ ಕೊರೋನಾ ಲಾಕ್‍ಡೌನ್‍ದಿಂದ ಸರಳವಾಗಿ ಆಚರಿಸುತ್ತಿದೆ. ದೇಶ ಸೇವೆಗೆ ಸೈನಿಕರನ್ನು ಅಣಿ ಮಾಡುತ್ತಿರುವ ಈ ಸಂಸ್ಥೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಕ.ಸಾ.ಪ. ತಾಲೂಕಾ ಘಟಕದ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಹೇಳಿದರು. ಶುಕ್ರವಾರ ಸಾಯಂಕಾಲ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ಸಂಸ್ಥೆಯ 2ನೇ ವರ್ಷದ ವರ್ಷಾಚರಣೆಯ ಸರಳ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ನೆರೆ ಹಾವಳಿಯಲ್ಲಿ …

Read More »

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರಕಾರ ಹೆಚ್ಚಿನ ಭದ್ರತೆ ವಹಿಸಲಿ: ಬೀಮಪ್ಪ ಗಡಾದ

ಮೂಡಲಗಿ: ಜಗತ್ತಿನಾದ್ಯಂತ ಹರಡುತ್ತಿರುವ ಮಹಾಮಾರಿ ಮಾರಕ ಕೊರೋನಾ ವೈರಸ್ ಸೊಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ,ಆಶಾ ಕಾರ್ಯಕರ್ತೆಯರಿಗೆ,ಪೌರ ಸೇವಾ ಸಿಬ್ಬಂದಿ ಮತ್ತು ಹಿರಿಯ ಪತ್ರಕರ್ತರಿಗೆ ಕೆ.ಇ.ಬಿ.ಪ್ಲಾಟ್ ಈರಣ್ಣ ನಗರದಲ್ಲಿ ಸರಳ ಸನ್ಮಾನ ಸಮಾರಂಭ ನಡೆಯಿತು. ಗುರುವಾರದಂದು ಸಾಯಂಕಾಲ ಗಜಬರ ಗೋಕಾಕ ಮತ್ತು ಮಾರುತಿ ಹಡಪದ ಅವರು ಹಮ್ಮಿಕೊಂಡ ಸರಳ ಸನ್ಮಾನ ಕಾರ್ಯಕ್ರಮದಲ್ಲಿ ಪೌರ ಸೇವಾ ಸಿಬ್ಬಂದಿ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ, ಕೊರೋನಾ ಸಾಂಕ್ರಾಮಿಕ …

Read More »

ಇಲ್ಲಿನ ಹತ್ತು ಪ್ರದೇಶಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ!

ಬೆಳಗಾವಿ: ಮಹಾಮಾರಿ ಕೊರೋನಾ ರೋಗದ ಹಿನ್ನಲೆಯಲ್ಲಿ ನಮ್ಮ ರಾಜ್ಯದಲ್ಲಿ ಇಂದಿನಿಂದ 3.0 ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದ ಲಾಕ್ ಡೌನ್ ನಲ್ಲಿ ಒಂದಿಷ್ಟು ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮಧ್ಯ ಮಾರಾಟಕ್ಕೆ ಅವಕಾಶ ನೀಡದೇ ಇರುವುದು ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಮಾಡಿದೆ. ಇಲ್ಲಿನ 10 …

Read More »

You cannot copy content of this page