ಶುಕ್ರವಾರ , ಏಪ್ರಿಲ್ 19 2024
kn
Breaking News

ಮೂಡಲಗಿ

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »

ವಿಕಲಚೇತನ ನೌಕರರಿಗೆ ಮನೆಯಿಂದಲೇ ಕೆಲಸ : ಬೀರಪ್ಪ ಅಂಡಗಿ ಚಿಲವಾಡಗಿ.

ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, …

Read More »

ಮೂಡಲಗಿ ಯುವಕ ವಾಯು ಸೇನೆಯ ಪೈಟರ್ ಪೈಲಟ್ ಹುದ್ದೆಗೆ ಗಿರೀಶ ಬಿಳ್ಳೂರ ಆಯ್ಕೆ

ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ ಯುಗದಲ್ಲಿ …

Read More »

ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ ಪಟ್ಟಣಕ್ಕೆ …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ …

Read More »

ಚರಂಡಿ, ಉದ್ಯಾನವನ ನಿರ್ಮಿಸಲು ಆಗ್ರಹಿಸಿ ಮನವಿ

ಮೂಡಲಗಿ – ನಗರದ ರಿ ಸ ನಂ. ೫೪೦/೧೧ ರಲ್ಲಿ ರಸ್ತೆ, ಚರಂಡಿ ಹಾಗೂ ಉದ್ಯಾನವನವನ್ನು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ ನಾಗರಿಕರು ಪುರಸಭೆಗೆ ಮನವಿ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಗೈರು ಹಾಜರಾಗಿರುವ ಮುಖ್ಯಾಧಿಕಾರಿಯವರ ಬದಲಿಗೆ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿರುವ ನಾಗರಿಕರು ೧೯೯೦-೨೦೦೦ ರಲ್ಲಿ ಟೌನ್ ಪ್ಲಾನಿಂಗ್ ಆಗಿರುವ ರಿ. ಸ ನಂ ೫೪೦/ ೧೧ ರಲ್ಲಿ ಸರಿಯಾದ ರಸ್ತೆ ಇಲ್ಲ,ಚರಂಡಿ ಮೇಲ್ಸೇತುವೆ ಕಟ್ಟಲಾಗಿದೆ ಆದರೆ ಅದು ನಾಲ್ಕು ಅಡಿ …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …

Read More »

ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆ

ಮೂಡಲಗಿ: ವಿಶ್ವಮಾನ್ಯ ನಾಯಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಎರಡನೆಯ ಅವಧಿಯ ಎರಡು ವರ್ಷಗಳನ್ನು ಪೂರೈಸಿದ ಈ ಸಮಯದಲ್ಲಿ ಕರೋನಾ ಹಿಮ್ಮೆಟ್ಟಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು ಹಾಗೂ ಪಂಚಾಯತ ಸಿಬ್ಬಂದಿ ಸೇರಿದಂತೆ ಅನೇಕರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆಗೆ ಒಳಪಡಿಸುವ …

Read More »

You cannot copy content of this page