ಗುರುವಾರ , ಏಪ್ರಿಲ್ 25 2024
kn
Breaking News

ರಾಜ್ಯ

ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹಳ್ಳೂರ : ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.   ಶನಿವಾರ  ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ …

Read More »

ಜಿಲ್ಲೆಯಲ್ಲಿನ ಶಾಲೆಗಳು ಬಂದ, ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು

ಬೆಳಗಾವಿ: ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ, 1 ರಿಂದ 9ನೇಯ ತರಗತಿಯವರೆಗೆ, ಇದೆ ಜನವರಿ 10ರಿಂದ 18ರ ವರೆಗೆ ಜಿಲ್ಲಾಧಿಕಾರಿಯವರು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಾಲೆಗಳಿಗೆ …

Read More »

ಮೂಡಲಗಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಮಾರಾಟವಾಗುತ್ತಿದೆಯಾ? ಎಲ್ಲಿದೆ ಜಿಲ್ಲಾಡಳಿತ? ಎಲ್ಲಿದೆ ಆರೋಗ್ಯ ಇಲಾಖೆ?

ಮೂಡಲಗಿ: ಜಗತ್ತಿನಾದ್ಯಂತ ಕೊರೋನಾ ಮಾಹಾಮಾರಿ 2ವರ್ಷಗಳಿಂದ ಅತೀವವಾಗಿ ಕಾಡುತ್ತಿದೆ. ಇದರಿಂದಾಗಿ ತತ್ತರಗೊಂಡ ಸರ್ಕಾರಗಳು ಎಚ್ಚೆತ್ತು, ಲಸಿಕೆ ಕಂಡು ಹಿಡಿದು ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಜನರ ಮುಂದೆ ಇಟ್ಟಿದೆ. ಸರ್ಕಾರ ಕೊರೋನಾ ಹೆಚ್ಚಳ ವೇಳೆ ಎರಡನೆ ಡೋಸ್ ಪಡೆಯುವಂತೆ ಜನತೆಗೆ ಸಾಕಷ್ಟು ಮನವಿ ಮಾಡಿಕೊಳ್ಳುತ್ತಿದೆ. ಮೊದಲು ಮತ್ತು ಎರಡನೇಯ ಡೋಸ್ ಜನಸಾಮಾನ್ಯರಿಗೆ ಬೇಗನೆ ನೀಡುವಂತೆ ಸಂಬಂದ ಪಟ್ಟ ಇಲಾಖೆಗಳು, ಸ್ಥಳಿಯ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಒತ್ತಡ ಹಾಕುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದರೆ …

Read More »

ಮೂಡಲಗಿ ಶ್ರೀ ಶಿವಬೋಧರಂಗ ಮಠದಲ್ಲಿ ದತ್ತಾತ್ರೇಯಬೋಧ ಮತ್ತು ಶ್ರೀಧರಬೋಧರ ಪೀಠಾರೋಹಣ ಕಾರ್ಯಕ್ರಮ

ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿ ಸಂಸ್ಥಾನಮಠದಲ್ಲಿ ಶುಕ್ರವಾರ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿ ಅವರಿಗೆ ಶ್ರೀಕ್ಷೇತ್ರ ನೃಸಿಂಹವಾಡಿಯ ವೇದಮೂರ್ತಿ ಶ್ರೀಅವಧೂತ ಬೋರಗಾಂವಕರ ಅವರ ನೇತೃತ್ವದಲ್ಲಿ ಪೀಠಾರೋಹಣ ಧೀಕ್ಷಾ ಕಾರ್ಯಕ್ರಮವು ವಿಧಿವತ್ತಾಗಿ ನೆರವೇರಿತು. ಬೆಳಿಗ್ಗೆ ಕೆಳಗಿನಮಠದಲ್ಲಿ ಸನ್ನಿಧಿಗೆ ವಿಶೇಷ ಪೂಜೆಗಳು ನೆರವೇರಿದ ನಂತರ ಮೇಲಿನಮಠದಲ್ಲಿ ಸೌರಯಾಗ ಹೋಮದೊಂದಿಗೆ ಶ್ರೀಮಠದ ಸಂಪ್ರದಾಯದಂತೆ ಮತ್ತು ವಿವಿಧ ವಿಧಿವಿಧಾನಗಳೊಂದಿಗೆ ಉಭಯ ಶ್ರೀಗಳಿಗೆ ಧೀಕ್ಷೆಯನ್ನು ಪ್ರಧಾನ ಮಾಡಿದರು. ಧೀಕ್ಷೆ ಸ್ವೀಕರಿಸಿದ ಶ್ರೀಗಳು ಮೇಲಿನ ಮಠದಿಂದ …

Read More »

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಬೆಳಗಾವಿ- ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ ನಡೆಯ ವ್ಯಕ್ತಿ ಯಾಗಿದ್ದ ಜಾಲಪ್ಪ ಅವರ ನಿಧನದಿಂದ ರಾಜ್ಯಕ್ಕೆ ಅಪಾರ …

Read More »

ಮೂಡಲಗಿ ಪಟ್ಣದಲ್ಲಿ ಸರಣಿ ಕಳ್ಳತನ: ವಿಡಿಯೊದಲ್ಲಿ ಸೆರೆಯಾದ ಕಳ್ಳರ ಕರಾಮತ್ತು

ಮೂಡಲಗಿ: ಪಟ್ಟಣದಲ್ಲಿ ಕಳೆದ ತಿಂಗಳಿನಿಂದ ಸರಣಿ ಕಳ್ಳತನವಾಗುತ್ತಿದ್ದು ಪಟ್ಟಣದ ವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ನವೆಂಬರ್‌ 28ರ ರಾತ್ರಿ ಕಲ್ಮೇಶ್ವರ ವೃತದಲ್ಲಿನ ಒಂದು ಅಂಗಡಿಯನ್ನು ಕಳ್ಳರು ಕದಿಯಲು ಪ್ರಯತ್ನಿಸಿದ್ದು, ಅದೃಷ್ಟವಶಾತ್ ಈ ಕದಿಮರ ಕೈಗೆ ಬೆಲೆಬಾಳುವ ವಸ್ತು, ಹಣ ಸಿಕ್ಕಿಲ್ಲ. ಮತ್ತೆ ಅದೆ ನವೆಂಬರ ತಿಂಗಳಿನ 29ರ ರಾತ್ರಿ ಮಾರ್ಕೆಟ್ ರಸ್ತೆಯಲ್ಲಿನ ತಗಡಿನ ಶೆಡ್ ಅಲ್ಲಿರುವ ಸುಭಾಸ ಗಾರ್ಮೆಂಟ್ಸ್ ಅನ್ನವ ಬಡಪಾಯಿ ವ್ಯಕ್ತಿಯ ಬಟ್ಟೆ ಅಂಗಡಿಯಲ್ಲಿ ಕಳ್ಳರು ತಮ್ಮ ಕೈಚಳಕ …

Read More »

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಯೋದನಿಗೆ ಸತ್ಕರಿಸಿದ ಗ್ರಾಮಸ್ಥರು

ಹಳ್ಳೂರ: ಉತ್ತರಖಾಂಡ ಡೆಹರಾಡೂಣದ ಮದ್ರಾಸ್ಸ್ ಇಂಜನಿಯರ್ ರಜಿಮೆಂಟ್‍ನ ಎಸಿಪಿ ಹವಾಲ್ದಾರರಾಗಿ ಕಾರ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತ ಹೊಂದಿರುವ ಸುರೇಶ ಮಾರುತಿ ಬಾಗಡಿ ಅವರಿಗೆ ಗ್ರಾಮಸ್ಥರು ಬಸವೇಶ್ವರ ವೃತ್ತದ ಬಳಿ ಅದ್ದೂರಿಯಾಗಿ ಸ್ವಾಗತ ಮಾಡಿ, ಮಹಿಳೆಯರು ತಿಲಕವನ್ನು ಇಟ್ಟು ಬರಮಾಡಿಕೋಂಡರು. ಸುಮಾರು 20 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಇವರು ರವಿವಾರರಂದು ತಾಯ್ನಾಡು ಹಳ್ಳೂರ ಗ್ರಾಮಕ್ಕೆ ಆಗಮಿಸಿದ್ದರಿಂದ ವಿವಿಧ ವಾಧ್ಯಮೇಳಗಳೊಂದಿಗೆ ಧ್ವನಿಗೂಡಿಸಿ ಜೈ ಜವಾನ್, ಜೈ ಕಿಸಾನ್ ಎಂಬ ಜಯ …

Read More »

ವಿಶ್ವ ಮಣ್ಣು ಆರೋಗ್ಯ ದಿನಾಚಾರಣೆಯ ಸಮಾರಂಭ

ಹಳ್ಳೂರ: ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ, ಮಣ್ಣಿನ ಸವಕಳಿಯನ್ನು ತಪ್ಪಿಸುವ ಮಣ್ಣನ್ನು ಲವಣಯುಕ್ತಗೋಳಿಸುವುದನ್ನು ಬಿಡುವುದು ಸೇರಿದಂತೆ ಮಣ್ಣು ಸಂರಕ್ಷಣೆಯ ಮಹತ್ವದ ತಿಳುವಳಿಕೆ ದಿವಸವೆಂದು ಮುಖಂಡ ಹಣಮಂತ ತೇರದಾಳ ಹೇಳಿದ್ದರು. ಸ್ಥಳೀಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ರವಿವಾರರಂದು ನಡೆದ ವಿಶ್ವ ಮಣ್ಣು ಆರೋಗ್ಯ ದಿನಾಚಾರಣೆಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಮಣ್ಣಿನ ಉತ್ಪಾದಕತೆ, ಆರೋಗ್ಯ, ಮಣ್ಣು ಪರೀಕ್ಷೆಯ ಮಹತ್ವವನ್ನು ಹಾಗೂ ರಸಗೊಬ್ಬರಗಳ ಮಾಹಿತಿಯನ್ನು ರೈತರಿಗೆ …

Read More »

ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ : ಲಖನ್ ಜಾರಕಿಹೊಳಿ

ಅಥಣಿ : ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ ಗುರುವಾರದಂದು ಜರುಗಿದ ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಗಳ ಬಲವರ್ಧನೆಗಾಗಿ ಯಾವುದೇ ಪಕ್ಷ ಸೇರದೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಬೆಂಬಲಿಸಿ ಆಶೀರ್ವಾದ ಮಾಡುವಂತೆ ಕೋರಿದರು. …

Read More »

ಭಾರತೀಯ ಸಂವಿಧಾನ ಸಮರ್ಪಣಾ ದಿವಸ ಆಚರಿಸಲಾಯಿತ್ತು

ಹಳ್ಳೂರ: ನವೆಂಬರ 26 ಭಾರತ ದೇಶಕ್ಕೆ ಮಹತ್ವದ ದಿನ ಗೌರವ ಕೋಡುವ ದಿನವಾಗಿದೆ. ಈ ದಿವಸ ಯಾರು ಮರೆಯಲು ಸಾಧ್ಯವಿಲ್ಲ, ಭಾರತದ ಸಂವಿಧಾನ ಜಗತ್ತಿನ ಅತಿದೊಡ್ಡ ಸಂವಿಧಾನ, 1949 ರ ನವೆಂಬರ 26 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತ್ತು. ಇದರ ಅಂಗವಾಗಿ ನಾವು ಸಂವಿಧಾನ ದಿನವನ್ನು ಆಚರಿಸುತ್ತಿದ್ದೇವೆ ಎಂದು ಪ.ಜಾತಿ,ಪ.ಪಂಗಡಗಳ ಬಲವರ್ಧನ ಮತ್ತು ಮೇಲ್ವಿಚಾರಣಾ ಸಮಿತಿಯ ಜಿಲ್ಲಾಧ್ಯಕ್ಷ ಮಾರುತಿ ನಾ. ಮಾವರಕರ ಹೇಳಿದರು. ಸ್ಥಳೀಯ ಪ.ಜಾತಿ,ಪ.ಪಂಗಡಗಳ ಬಲವರ್ಧನ ಮತ್ತು ಮೇಲ್ವಿಚಾರಣಾ ಸಮಿತಿಯ …

Read More »

You cannot copy content of this page