ಶುಕ್ರವಾರ , ಏಪ್ರಿಲ್ 26 2024
kn
Breaking News

ರಾಜ್ಯ

ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಬದಲಿ …

Read More »

ವಿಕಲಚೇತನ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಬಿ.ಸಿ‌.ನಾಗೇಶ

ಬೆಂಗಳೂರು:ವಿಕಲಚೇತನ ಶಿಕ್ಷಕರ ಅನೇಕ ಸಮಸ್ಯೆಗಳಿದ್ದು ಅವರ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಹೇಳಿದರು. ಅವರು ನಗರದ ತಮ್ಮ ಕಚೇರಿಯಲ್ಲಿ ವಿಕಲಚೇತನ ನೌಕರರ ಸಂಘದಿಂದ ನೀಡಿದ ಮನವಿ ಹಾಗೂ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ,ವಿಕಲಚೇತನ ಶಿಕ್ಷಕರ ಸಮಸ್ಯೆಗಳು ಸೇರಿದಂತೆ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಒಳಗೊಂಡ ಮನವಿ ಪತ್ರವನ್ನು ವಿಕಲಚೇತನ ನೌಕರರ ಸಂಘದ ವತಿಯಿಂದ ನೀಡಿದ್ದಾರೆ.ಮನವಿಯಲ್ಲಿ ಇರುವ ಅಂಶಗಳು ನ್ಯಾಯಯುತವಾಗಿವೆ.ನಾನು ಕೂಡಾ ನೂತನವಾಗಿ …

Read More »

ಗಿಡ ಮರ ಹಾಗೂ ಸಸ್ಯಗಳನ್ನು ನೆಟ್ಟು ಪೋಷಿಸುವದು ಅತ್ಯಾವಶ್ಯಕವಾಗಿದೆ : ಸಮೀರಅಹ್ಮದ ದಬಾಡಿ

ಮೂಡಲಗಿ: ಸರಕಾರಿ ಮತ್ತು ಖಾಸಗಿ ಕಛೇರಿಗಳಲ್ಲಿ, ಶಾಲಾ ಆವರಣ, ದೈವತ್ವವಿರುವ ಕ್ಷೇತ್ರಗಳು, ಪರಿಸರದಲ್ಲಿ ಗಿಡ ಮರ ಹಾಗೂ ಸಸ್ಯಗಳನ್ನು ನೆಟ್ಟು ಪೋಷಿಸುವದು ಅತ್ಯಾವಶ್ಯಕವಾಗಿದೆ ಎಂದು ಮೂಡಲಗಿ ಸಮೂಹ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿ ಹೇಳಿದರು. ಅವರು ಪಟ್ಟಣದ ಸಮೂಹ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಸಸಿ ನೇಡುವ ಮೂಲಕ ಚಾಲನೆ ನೀಡಿದರು. ಕೊರೋನಾ ಹಾಗೂ ಆಕಾಲಿಕ ಮಳೆಯಿಂದಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಗಳು ಕುಂಠಿತವಾಗುತ್ತಿದೆ. ಬಿಡುವಿನ ಸಮಯದಲ್ಲಿ ಕಛೇರಿ ಸೌಂದರ್ಯ ಹಾಗೂ ಕಚೇರಿಯ ಮುಂದೆ …

Read More »

ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಶಾಸಕ ಬಾಲಚಂದ್ರ

ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ ಸಮೀಕ್ಷೆ …

Read More »

ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿ ಅಥಣಿ ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ರೈತರು

ಅಥಣಿ : ಪ್ರವಾಹ ಭೀತಿ ಎದುರಿಸುತ್ತಿರುವ ಕೃಷ್ಣಾ ನದಿ ತೀರದ ಜನರು ಪರಿಸ್ಥಿತಿ ಹೇಳತೀರದಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸಿಡಿದೆದ್ದ ರೈತ ಮುಖಂಡರು ಅಥಣಿ ತಾಲೂಕಿನ ಗ್ರಾಮಗಳಾದ ನದಿ ಇಂಗಳಗಾವ್, ದರೂರ್, ತೀರ್ಥ, ಸಪ್ತಸಾಗರ, ಕವಟಗೊಪ್ಪ, ಶೇಗುಣಸಿ ಸೇರಿದಂತೆ ಹಲವು ಹಳ್ಳಿಗಳು ಸಂಪೂರ್ಣ ಜಲಾವೃತವಾಗಿದ್ದು ವಾಸಿಸಲು ಸೂರು ಇಲ್ಲದೆ ಮನೆ-ಮಠ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ಜೀವನ ಸಾಕಾಗಿ ಹೋಗಿದೆ ನಮಗೆ ಶಾಶ್ವತ ಪರಿಹಾರ …

Read More »

ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್

ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …

Read More »

SLC ವಿಧ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ಸ್ಯಾನಿಟೈಸರ್ ಊಟದ ಪ್ಯಾಕೆಟ್,ನೀರಿನ ಬಾಟಲ್,ವಿತರಿಸಿದ ಶಿಕ್ಷಣ ಪ್ರೇಮಿ ಚಿಕ್ಕ ರೇವಣ್ಣ

ರಾಮದುರ್ಗ: ಪಟ್ಟಣದ ಖ್ಯಾತ ಉದ್ಯಮಿ ಚಿಕ್ಕರೇವಣ್ಣನವರು ಕೋವಿಡ್ ಸಂದರ್ಭದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿ ಗಳಲ್ಲಿ ಆಹಾರದ ಕಿಟ್ ವಿತರಿಸಿ ಮಾನವೀಯತೆ ಮೆರೆದರು. SSLC ವಿಧ್ಯಾರ್ಥಿಗಳ ನೇರವಿಗೆ ಬಂದ ಶಿಕ್ಷಣ ಪ್ರೇಮಿ ಚಿಕ್ಕ ರೇವಣ್ಣನವರು ರಾಮದುರ್ಗ ತಾಲೂಕಿನ 17 ಪರೀಕ್ಷಾ ಕೇಂದ್ರಗಳಿಗೆ ಹಾಗೂ 3901ಎಲ್ಲಾ ವಿಧ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿವರ್ಗದವರಿಗೆ 6000 ಮಾಸ್ಕ್, 6000 ಸ್ಯಾನಿಟೈಸರ್,6000 ಊಟದ ಪ್ಯಾಕೆಟ್, 6000 ನೀರಿನ ಬಾಟಲ್ಗಳನ್ನು ವಿತರಣೆ ಮಾಡಲು ವ್ಯವಸ್ಥೆ ಮಾಡಿದ್ದಾರೆ,ಇಂದು ತಾಲೂಕಿನ ಎಲ್ಲಾ ಪರೀಕ್ಷಾ …

Read More »

ಕೋವಿಡ್-19 ಎಸ್.ಒ.ಪಿಯ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ SSLC ಪ್ರಥಮ ಪರೀಕ್ಷೆ ಯಶಸ್ವಿ : ತಹಶಿಲ್ದಾರ ಡಿ.ಜೆ ಮಹಾತ

ಮೂಡಲಗಿ : ಕೋವಿಡ್-19 ಎಸ್.ಒ.ಪಿಯ ಪ್ರಕಾರ ಅಗತ್ಯ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಪ್ರಥಮ ಪರೀಕ್ಷೆಯು ಯಶಸ್ವಿಯಾಗಿದೆ. ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ಮಂದಹಾಸದೊಂದಿಗೆ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವದು ಸಂತಸ ತಂದಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜೆ ಮಾಹತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವಾರ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರಥಮ ಪರೀಕ್ಷೆಯ ಹಿನ್ನೆಲೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಕ್ರಮಗಳ ಕುರಿತು ಮಾತನಾಡಿ, ಪರೀಕ್ಷೆಗಳು ಪ್ರತಿಯೊಬ್ಬರಿಗೂ ಪುನರಾವಲೋಕನ ಮಾಡಿಕೊಳ್ಳಲು …

Read More »

ಮಕ್ಕಳು ಭಯಬಿಟ್ಟು ಧೈರ್ಯದಿಂದ ಪರೀಕ್ಷೆ ಎದುರಿಸಿ : ನಾಯ್ಕ

ಮೂಡಲಗಿ: ‘ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ನಿಯೋಜನೆಗೊಂಡಿರುವ 35 ಪರೀಕ್ಷಾ ಕೇಂದ್ರಗಳು ಇಲಾಖೆಯ ಮಾರ್ಗಸೂಚಿಯಂತೆ ಪೂರ್ಣವಾಗಿ ಸಿದ್ದಗೊಂಡಿವೆ’ ಎಂದು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹ ನಿರ್ದೇಶಕ ರಾಜೀವ ವಿ. ನಾಯ್ಕ ಹೇಳಿದರು. ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸಿದ್ದತೆಯನ್ನು ಪರಿಶೀಲಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಬಿಟ್ಟು ಪರೀಕ್ಷೆಗೆ ಹಾಜರಾಗುವ ರೀತಿಯಲ್ಲಿ ಕೇಂದ್ರಗಳನ್ನು …

Read More »

You cannot copy content of this page