ಶುಕ್ರವಾರ , ಮೇ 3 2024
kn
Breaking News

Recent Posts

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ :ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ ನೆಲೆಯೂರಲು ರೇವಣಸಿದ್ಧೇಶ್ವರರು …

Read More »

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ ಆರ್ ಸಂತಿ ಪಿಯು ಕಾಲೇಜ ಹಳ್ಳೂರ ಉತ್ತಮ ಸಾಧನೆ: ಪ್ರಾಚಾರ್ಯೆ ಸಾವಿತ್ರಿ ಕಮಲಾಪುರ

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೦೨೨ ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿನಿ ಪೂರ್ಣಿಮಾ ಅಂಗಡಿ ವಾಣಿಜ್ಯ ವಿಭಾಗದಲ್ಲಿ ೫೮೬(೯೭.೬೬%) ಅಂಕಗಳನ್ನು ಪಡೆಯುವ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಕಲಾ ವಿಭಾಗದಲ್ಲಿ ಸವಿತಾ ಕೌಜಲಗಿ ೫೭೯ (೯೬.೫೦%) ಅಂಕಗಳೊoದಿಗೆ ಶೈಕ್ಷಣಿಕ ಜಿಲ್ಲೆಗೆ ತೃತೀಯ ಸ್ಥಾನಗಳನ್ನು ಪಡೆಯುವ ಮೂಲಕ ಗ್ರಾಮೀಣ ಪ್ರದೇಶದಲ್ಲಿದ್ದರು ಸಹ ಶೈಕ್ಷಣಿಕವಾಗಿ ಸಾಧನೆ ಗೈದಿದ್ದಾರೆ …

Read More »

ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಗೆ ಸನ್ಮಾನ

ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಮೂಡಲಗಿಯ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ಧೇಶಕ ಮಾರುತಿ ಮರಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ, ನಿರ್ಧೇಶಕರಾದ ಮಡ್ಡೆಪ್ಪ ಕೊರಕಪೂಜೇರ, ಮುತ್ತುರಾಜ ಬಡವಣ್ಣಿ, ಸಿದ್ದು ದೇವರಮನಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಯಾದವಾಡ, ಲಕ್ಷ್ಮಣ್ ಮರಡಿ, ಲಕ್ಕಪ್ಪ ಕೊರಕಪೂಜೇರ ಹಾಗೂ …

Read More »

ಜುಲೈ 13 ರಂದು ಕಾಗಿನೆಲೆಯಲ್ಲಿ ಪುಣ್ಯಾರಾಧನೆ, ಗುರುವಂದನ ಮಹೋತ್ಸವ : ಡಾ. ರಾಜೇಂದ್ರ ಸಣ್ಣಕ್ಕಿ

ಮೂಡಲಗಿ: ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ ೧೬ ನೇ ವರ್ಷದ ಪುಣ್ಯಾರಾಧನೆ ಹಾಗೂ ಜಗದ್ಗುರು ಶ್ರೀಶ್ರೀಶ್ರೀ ನಿರಂಜನಾನoದಪುರಿ ಮಹಾಸ್ವಾಜಿಗಳ ಗುರುವಂದನಾ ಮಹೋತ್ಸವವು ಜುಲೈ ೧೩ ರಂದು ಕಾಗಿನೆಲೆಯಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ತಿಳಿಸಿದರು. ಅವರು ರವಿವಾರ ಪಟ್ಟಣದ ಬೀರೇಶ್ವರ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಪ್ರದೇಶ ಕುರುಬರ …

Read More »

ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳೂರ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ

ಮೂಡಲಗಿ : 2021_22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಳ್ಳಿಯ ಮಕ್ಕಳು ಸಿಟಿ ಮಕ್ಕಳನ್ನು ಮೀರಿ ಸಾಧನೆ ಮಾಡಿದ್ಧು ತುಂಬಾ ಸಂತೋಷ ಎಂದು ಪ್ರಾಚಾರ್ಯರಾದ ಎಸ್ ಎಮ್ ಕಮಲಾಪೂರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ವಾಣಿಜ್ಯ ವಿಭಾಗದಲ್ಲಿ ಕುಮಾರಿ ಪೂರ್ಣಿಮಾ ಅಂಗಡಿ ಅವಳು 600ಕ್ಕೆ 586 ಅಂಕ ಪಡೆದು ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಪ್ರಥಮ ಸ್ಥಾನ ಬಂದರೆ ಕಲಾ ವಿಭಾಗದಲ್ಲಿ ಕುಮಾರಿ ಸವಿತಾ ಬ ಕೌಜಲಗಿ 600 ಕ್ಕೆ 579 …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ

ಮೂಡಲಗಿ: ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ ಎಲ್ಲ ರೈತ ಭಾಂಧವರು ಇದರ …

Read More »

ರಾಜಕೀಯ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷ ದೆಹಲಿಯಿಂದ ಕರ್ನಾಟಕ್ಕೆ ಬಂದಿದೆ : ಉಪಾಧ್ಯಕ್ಷ ಬಾಸ್ಕರಾವ

ಮೂಡಲಗಿ: ಇಡೀ ರಾಜಕೀಯ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷ ದೆಹಲಿಯಿಂದ ಕರ್ನಾಟಕ್ಕೆ ಬಂದಿದ್ದು, ಅದು ಬೆಂಗಳೂರಿಗೆ ಮಾತ್ರ ಸಿಮೀತವಾಗದೇ ಇಡೀ ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಪಕ್ಷ ಸಂಘಟನೆಯಾಗುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ರಾಜಕೀಯವನ್ನು ಬದಲಾವಣೆ ಮಾಡುವ ಶಕ್ತಿ ಆಮ್ ಆದ್ಮಿ ಪಕ್ಷಕ್ಕಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಾಸ್ಕರಾವ ಹೇಳಿದರು. ಮೂಡಲಗಿ ಸಮೀಪದ ಸಮರ್ಥ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಸಂಜೆ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ …

Read More »

ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …

Read More »

ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಮಾರಂಭ ಉದ್ಘಾಟನೆ

ಮೂಡಲಗಿ; ಭಾರತ ದೇಶದಲ್ಲಿ ೧೫ ರಿಂದ ೩೫ ವಯಸ್ಸಿನ ಯುವ ಪೀಳಿಗೆ ಸುಮಾರು ೪೦ಕೋಟಿ ಇದ್ದು, ಅವರ ಸೇವೆಯನ್ನು ಸರಿಯಾಗಿ ಸದುಪಯೋಗ ಪಡೆಸಿಕೊಂಡರೆ ಭಾರತ ದೇಶ ಒಳ್ಳೇಯ ಶಕ್ತಿ ಶಾಲಿ ಆಗುವುದು ಬಹಳ ಸುಲಭ ಎಂದು ನವದೆಹಲಿಯ ಭಾರತ ಸರ್ಕಾರ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯದ ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಅಶೋಕ ದಳವಾಯಿ, ಹೇಳಿದರು. ತಾಲೂಕಿನ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ …

Read More »

ಸಮಾಜ ಸುಧಾರಣೆಗೆ ಮಠಾಧೀಶರು ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿದರು ಅದು ಅವರ ವೈಯಕ್ತಿಕವಾಗಿರುವುದಿಲ್ಲ ಅದು ಸಮಾಜದ ಚಟುವಟಿಕೆ :ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಮಾಜ ಸುಧಾರಣೆಗೆ ಮಠಾಧೀಶರು ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿದರು ಅದು ಅವರ ವೈಯಕ್ತಿಕವಾಗಿರುವುದಿಲ್ಲ ಅದು ಸಮಾಜದ ಚಟುವಟಿಕೆಯಾಗಿರುತ್ತದೆ. ಹೀಗಾಗಿ ಅವರು ಮಾಡುವಂತಹ ಕಾರ್ಯಕ್ಕೆ ಸಹಕಾರ ಕೊಡುವುದರ ಮುಖಾಂತರ ಜನಸಾಮ್ಯಾನರಾದ ನಾವು ಕೂಡ ಈ ನಾಡಿನ ಅನೇಕ ಶರಣರ ವಿಚಾರಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಜೂನ ೧೩ ರಂದು ಸುಣಧೋಳಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, …

Read More »

You cannot copy content of this page