ಬುಧವಾರ , ಮೇ 15 2024
kn
Breaking News

Recent Posts

ಟಾಟಾ ಕಲಿಕಾ ಟ್ರಸ್ ಹಾಗೂ ಶಾಲೆಯ ವತಿಯಿಂದ‌ ದಾಖಲಾತಿ ಆಂದೋಲನ ಜಾಗೃತಿ ಜಾಥಾ

ಕೊಪ್ಪಳ: ತಾಲೂಕಿನ ಮತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತೂರು ಮತ್ತು ಕಲಿಕೆ ಟಾಟಾ ಟ್ರಸ್ಟ್ ಸಂಯೋಗದೊಂದಿಗೆ ದಾಖಲಾತಿ ಮತ್ತು ಹಾಜರಾತಿ ಆಂದೋಲನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಧ್ಯಕ್ಷರು ಉಪಾಧ್ಯಕ್ಷರು ಶಾಲೆಯ ಸ್ಡಿಎಂಸಿ ಅಧ್ಯಕ್ಷರು ಸದಸ್ಯರು ಮುಖ್ಯಗುರುಗಳು ಎಲ್ಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು ನನ್ನ ಸಹೋದ್ಯೋಗಿ ಮಿತ್ರರು ಶ ತಮ್ಮಣ್ಣ ಊರಿನ ಮುಖಂಡರು ತಮಟೆ ವಾದ್ಯದವರು ಹಾಜರಿದ್ದರು.. ಗ್ರಾಮ ಪಂಚಾಯಿತಿ ಅಧಿಕಾರಿ ಅಕ್ಬರ್ …

Read More »

ಅರಣ್ಯವನ್ನು ಉಳಿಸಿ, ಪರಿಸರ ಬೆಳೆಸಿ : ಗಜಾನನ ಮನ್ನಿಕೇರಿ

ಗೋಕಾಕ: ಪರಿಸರವಿಲ್ಲದೆ ಮಾನವನ ಬದುಕು ಅಸಾಧ್ಯ, ಅರಣ್ಯವನ್ನು ಉಳಿಸಿ, ಬೆಳೆಸಿ ಪರಿಸರ ರಕ್ಷಣೆ ಮಾಡುವಂತೆ ಧಾರವಾಡದ ಅಪರ ಆಯುಕ್ತರ ಕಾರ್ಯಾಲಯದ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಅವರು ಶನಿವಾರದಂದು ಅರಣ್ಯ ಇಲಾಖೆಯ ನರ್ಸರಿಯಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಶಿಕ್ಷಣ ಇಲಾಖೆಯವರು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಬೀಜ ಉಂಡೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ನಿಸರ್ಗ ಎಲ್ಲಾ ಜೀವಿಗಳಿಗೆ ರಕ್ಷಣೆ ನೀಡುತ್ತಿದೆ. ಜೀವಿಗಳು ಬದುಕಲು ಆಮ್ಲಜನಕ ನೀರು ಆಹಾರ …

Read More »

ಹನಮಂತ ನಿರಾಣಿ & ಅರುಣ ಶಹಾಪೂರ ಒಳ್ಳೆಯ ಹಾಗೂ ಉತ್ತಮ ಹಿನ್ನಲೆಯಿಂದ ಬಂದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತದ ಮತಗಳನ್ನು ನೀಡಿ : ಈರಣ್ಣ ಕಡಾಡಿ

ಮೂಡಲಗಿ- ವಾಯುವ್ಯ ಪದವಿಧರ ಹಾಗೂ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಹನಮಂತ ನಿರಾಣಿ ಮತ್ತು ಅರುಣ ಶಹಾಪೂರ ಒಳ್ಳೆೆಯ ಚಾರಿತ್ಯ ಹಾಗೂ ಉತ್ತಮ ಹಿನ್ನಲೆಯಿಂದ ಬಂದ ಅಭ್ಯರ್ಥಿಗಳಾಗಿದ್ದು ಅವರನ್ನು ಮೊದಲ ಪ್ರಾಶಸ್ತದ ಮತಗಳನ್ನು ನಿಡುವ ಮೂಲಕ ಮತ್ತೋಮ್ಮೆ ತಮ್ಮ ಸೇವೆ ಮಾಡಲು ಅವಕಾಶ ನೀಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮೂಡಲಗಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ …

Read More »

ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ

. ಮೂಡಲಗಿ: ೧೦ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಸಂಸ್ಕೃತಿ ಕಲಿಸುವಲ್ಲಿ ತಾಯಿಯ ಪಾತ್ರ ಬಹಳ ಮುಖ್ಯವಾಗಿದೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲುಕಿನ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ ಒಂದನೆಯ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ಸಂಸ್ಕಾರ ಹಾಗೂ ತಾಯಂದಿರ ಸಭೆಯಲ್ಲಿ ಮಾತನಾಡಿ, ಇಂದಿನ ಅಧುನಿಕ ಯುಗದಲ್ಲಿ ಹಾಗೂ ತಂತ್ರಜ್ಞಾನ ಮುಂದುವರೆದ ನೆಪದಲ್ಲಿ ಶಿಕ್ಷಣವು ವ್ಯಾಪಾರಿಕರಣವಾಗುತ್ತಿರುವ ಸಂಧರ್ಭದಲ್ಲಿ ಈ ಶಾಲೆಯ ಒಂದನೆಯ ತರಗತಿಗೆ …

Read More »

ವರದಿ ವಿಳಂಭ ನೀತಿ ಖಂಡಿಸಿ: ಬೀರಪ್ಪ ಅಂಡಗಿ ಚಿಲವಾಡಗಿ ಧರಣಿ

ಕೊಪ್ಪಳ:ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರ ಮೇಲೆ ಬಸವರಾಜ ಶೀಲವಂತರ ಎಂಬುವರು ಭ್ರಷ್ಟಾಚಾರ, ಹಗರಣ ಮಾಡಿದ್ದಾರೆ ಎಂದು ಆರೋಪಿಸಿ ಯಾವುದೇ ದಾಖಲೆ ನೀಡದೇ ಏಕಾಏಕಿ ದೂರು ನೀಡಿದ್ದರು.ಈ ದೂರಿನ ಅನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ದಾಖಲೆ ಪಡೆಯದೆ ಏಕಾಏಕಿ ಬೀರಪ್ಪ ಅಂಡಗಿ ಚಿಲವಾಡಗಿ ಅವರ ವಿರುದ್ದ ವಿಚಾರಣಾಧಿಕಾರಿಗಳನ್ನು ಹಾಗೂ ಮಂಡಣಾಧಿಕಾರಿಗಳನ್ನು ನೇಮಕ ಮಾಡುತ್ತಾರೆ.ವಿಚಾರಣೆ ಅಧಿಕಾರಿಗಳು ಹಾಗೂ ಮಂಡನಾಧಿಕಾರಿಗಳು ಬೀರಪ್ಪ ಆಂಡಗಿ ಚಿಲವಾಡಗಿ ಅವರ ವಿರುದ್ದ ಅವರ …

Read More »

ಎಸ್‌ಎಸ್‌ಎಲ್‌ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷ್ಮಿ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ

ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮಿಯ ತಳವಾರ ಅವರನ್ನು ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ ೬೨೫ ರ ಪೈಕಿ ೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಅರಭಾವಿ ಕ್ಷೇತ್ರದ ಕೀರ್ತಿ ಪತಾಕೆಯನ್ನು ಹಾರಿಸಿರುವ ಮಹಾಲಕ್ಷ್ಮಿ ತಳವಾರ ಅವರನ್ನು ಶಾಸಕರ ಆಪ್ತ ಸಹಾಯಕರಾದ …

Read More »

ವರದಿ ನೀಡಲು ವಿಳಂಬ: ಬಿ.ಇ.ಓ.ಕಚೇರಿ ಮುಂದೆ ನಾಳೆ‌ ಬೀರಪ್ಪ ಅಂಡಗಿ ಧರಣಿ

ಕೊಪ್ಪಳ: ಸಿ.ಪಿ.ಎಸ್.ಶಾಲೆಯ ಶಿಕ್ಷಕರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರ ಮೇಲೆ ಭ್ರಷ್ಟಾಚಾರ ಹಾಗೂ ಹಗರಣ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಂತೆ ಬಸವರಾಜ ಶೀಲವಂತರ ಎಂಬುವರು ದೂರು ನೀಡಿದ್ದರು. ದೂರಿನ ಅನ್ವಯ ಬಿ.ಇ.ಓ.ಅವರು ನಿಯಮದಲ್ಲಿ ಇಲ್ಲದಿದ್ದರೂ ಕೂಡಾ ತನಿಖಾಧಿಕಾರಿ ಹಾಗೂ ಮಂಡನಾಧಿಕಾರಿಗಳನ್ನು ನೇಮಕ‌ ಮಾಡಿ,ಆ ದೂರಿಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಕಳೆದಿದೆ.ಅಲ್ಲದೇ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಕೂಡಾ ತಮ್ಮ ದೂರಿಗೆ ಸಂಬಂಧಿಸಿದಂತೆ ನೀಡಿದ ದೂರಿನ ದಾಖಲೆ …

Read More »

SSLC ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625 ಅಂಕ ಪಡೆದ ಮಹಾಲಕ್ಷ್ಮಿ ತಳವಾರ ವಿದ್ಯಾರ್ಥಿನಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ಮೂಡಲಗಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಅರಭಾಂವಿ ಕ್ಷೇತ್ರದ ಶೈಕ್ಷಣಿಕ ಸಾಧನೆಯನ್ನು ರಾಜ್ಯಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾಳೆಂದು ಕಹಾಮ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷವ್ಯಕ್ತಪಡಿಸಿದ್ದಾರೆ. ಮೂಡಲಗಿ ವಲಯವು ಶೈಕ್ಷಣಿಕವಾಗಿ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದೆ. ಗುಣಾತ್ಮಕ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಎಸ್.ಎಸ್.ಎಲ್.ಸಿ …

Read More »

SSLC ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮಹಾಲಕ್ಷ್ಮಿ ತಳವಾರ 625 ಅಂಕ: ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಕಳೆದ ಎಪ್ರೀಲ್ ನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೩ ಅಂಕ ಪಡೆದ ಮೂಡಲಗಿ ಶೈಕ್ಷಣಿಕ ವಲಯದ ಕೌಜಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮಿ ತಳವಾರ ಮರು ಮೌಲ್ಯ ಮಾಪನದಲ್ಲಿ ೬೨೫ ಕ್ಕೆ ೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವದಾಗಿ ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಸಂದರ್ಭದಲ್ಲಿ ಇಂಗ್ಲೀಷ ಮತ್ತು ವಿಜ್ಞಾನ ವಿಷಯಗಳಿಗೆ ತಲಾ ೯೯ ಅಂಕ ಪಡೆದಿದ್ದಳು, …

Read More »

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ: ಜ್ಯೋತಿ ಪಾಟೀಲ

ಮೂಡಲಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ವಿಶ್ವ ಪರಿಸರ ದಿನವನ್ನು ಪರಿಸರದ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಉದ್ದೇಶದಿಂದ ವಿಶ್ವಸಂಸ್ಥೆಯು ಇದನ್ನು ಸ್ಥಾಪಿಸಿತು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನೂತನ ಕಟ್ಟಡದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡುತ್ತಾ, ಪ್ರಕೃತಿಮಾತೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು ನಮ್ಮ …

Read More »

You cannot copy content of this page