ಸೋಮವಾರ , ಏಪ್ರಿಲ್ 29 2024
kn
Breaking News

Recent Posts

ಕನ್ನಡ ರತ್ನ ರಾಜ್ಯ ಪ್ರಶಸ್ತಿಗೆ ನಾಡಿನ ಸಮಾಚಾರ ದಿನಪತ್ರಿಕೆ ಸಂಪಾದಕ ಬಸವರಾಜ ಉಪ್ಪಾರಟ್ಟಿ ಆಯ್ಕೆ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಬ್ಯಾಕೋಡನ ಪ್ರತಿಷ್ಠಿತ ಕನಕಶ್ರೀ ಪ್ರಕಾಶನವು ನೀಡುವ 2022ನೇ ಸಾಲಿನ “ಉತ್ತಮ ಪತ್ರಿಕೋದ್ಯಮ ಸೇವೆ ಸಲ್ಲಿಸಿದ್ದಕ್ಕಾಗಿ ಕನ್ನಡ ರತ್ನ ರಾಜ್ಯಪ್ರಶಸ್ತಿ”ಗೆ ನಾಡಿನ ಸಮಾಚಾರ ದಿನಪತ್ರಿಕೆ ಸಂಪಾದಕ ಬಸವರಾಜ ಉಪ್ಪಾರಟ್ಟಿ ಅವರು ಭಾಜನರಾಗಿದ್ದಾರೆ. ಇವರ ಸಾಹಿತ್ಯ ಕ್ಷೇತ್ರ ಹಾಗೂ ಇತರೆ ಸಂಘಟನಾ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ನೀಡುತ್ತಿದ್ದು ,ಇದೇ ಮೇ 29ರಂದು ಧಾರವಾಡದ ರಂಗಾಯಣದಲ್ಲಿ ಜರುಗುವ ಅಖಿಲ ಕರ್ನಾಟಕ ದ್ವಿತೀಯ ಕವಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ …

Read More »

ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧ್ಯ : ಅಜಿತ ಮನ್ನಿಕೇರಿ

ಮೂಡಲಗಿ: ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓರ್ವ ನಿಯೋಜಿತ ಶಿಕ್ಷಕರಿಂದ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಾರಂಭಗೊಂಡ ಶಾಲೆಯು, ಸದ್ಯ …

Read More »

ಸಭೆ ಆಯೋಜನೆ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮನವಿ ಪತ್ರ

ಕೊಪ್ಪಳ: ವಿಕಲಚೇತನ ಶಿಕ್ಷಕರ ಸಮಸ್ಯೆಗಳ ಕುರಿತು ಪರಿಹಾರ ಕಂಡುಕೊಳ್ಳವ ನಿಟ್ಟಿನಲ್ಲಿ ಸಭೆಯನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರಿಗೆ ನಗರದ ಸಾಹಿತ್ಯ ಭವನದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಶಿಕ್ಷಕರ ವರ್ಗಾವಣೆ ಸಮಯದಲ್ಲಿ ವಿಕಲಚೇತನ ಶಿಕ್ಷಕರಿಗೆ ಅವರ ಅಂಗವೈಕಲ್ಯಯ ಕುರಿತು ವೈದ್ಯಕೀಯ ಪ್ರಮಾಣ ತರಲು ಪದೇ ಪದೇ ಸೂಚಿಸುವುದು,ಸೇವಾ ಅವಧಿಯಲ್ಲಿ ಒಂದು …

Read More »

ಟೆಲಿಪೋನ್ ಸಲಹೆಗಾರ ಸಮಿತಿಗೆ ನೇಮಕ, ಸತ್ಕಾರ

ಮೂಡಲಗಿ: ಬಿ.ಎಸ್.ಎನ್.ಎಲ್ ಟೆಲಿಫೋನ್ ಸಲಹೆಗಾರ ಸಮಿತಿಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿ ನೇಮಕಗೊಂಡ ಬಿಜೆಪಿ ಕಾರ್ಯಕರ್ತರಾದ ಈರಪ್ಪ ಢವಳೇಶ್ವರ, ಶ್ರೀಶೃಲ ಪೂಜೇರಿ, ಬಸನಗೌಡ ಕೊಳದೂರ, ರೇನಪ್ಪ ಸೋಮನಗೌಡ, ಮಲ್ಲೇಶ ಸುಳೇಭಾವಿ ಅವರನ್ನು ಸಂಸದ ಈರಣ್ಣ ಕಡಾಡಿ ಅವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೇಮಕಗೊಂಡ ನೂತನ ಸದಸ್ಯರನ್ನು ಭಾರತ ದೂರ ಸಂಪರ್ಕ ಸಂಚಾರ ನಿಗಮದ ವಿಭಾಗ ಅಧಿಕಾರಿ ಎಸ್.ಕೆ.ಘೋಷ ಈ ಕುರಿತು ಆದೇಶ ಹೊರಡಿಸಿದ್ದು …

Read More »

ಅನ್ನದಾನವು ಶ್ರೇಷ್ಠ ದಾನವಾಗಿದೆ: ಬಸವಣ್ಣಿ ಮುಗಳಖೋಡ

’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ೭೩ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಬಸವಣ್ಣಿ ಮುಗಳಖೋಡ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‌ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ ಮಾಡುತ್ತಿರುವುದು ಶ್ಲಾಘನೀಯ …

Read More »

ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು : ಜಿ.ಬಿ ಗೌಡಪ್ಪಗೋಳ

ಮೂಡಲಗಿ: ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಆಯುಕ್ತ ಜಿ.ಬಿ ಗೌಡಪ್ಪಗೋಳ ಹೇಳಿದರು. ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹನ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡ ಮೊದಲ ದಿನದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದರೂ ಮಾನವೀಯ ಮೌಲ್ಯಗಳು …

Read More »

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ

ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್‌ನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರದಂದು ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ …

Read More »

ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ

ಮೂಡಲಗಿ : ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ ಸಮಾನ ಅವಕಾಶದ ಭರವಸೆಯನ್ನು ಕೊಡಮಾಡಿದೆ ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾನಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ನ್ಯಾಯಾಧೀಶರ ಅಧಿಕಾರ ಸ್ವೀಕಾರ ಸ್ವಾಗತ ಕಾರ್ಯಕ್ರಮದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡುತ್ತಾ, ಉತ್ತರ ಕರ್ನಾಟಕದ ಜನ ನ್ಯಾಯಾಧೀಶರಿಗೆ ಗೌರವ ನೀಡುತ್ತಾರೆ, ನಾನೂ ಗ್ರಾಮೀಣ ಭಾಗದಿಂದ …

Read More »

ಬಡ್ತಿ ಮೀಸಲಾತಿ ಆದೇಶ ಜಾರಿಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬೀರಪ್ಪ ಅಂಡಗಿ ಚಿಲವಾಡಗಿ ಪತ್ರ

ಕೊಪ್ಪಳ: ವಿಕಲಚೇತನ ನೌಕರರಿಗೆ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಶೇಕಡಾ ೪ ರಷ್ಟು ಬಡ್ತಿಯಲ್ಲಿ‌ ಮೀಸಲಾತಿ ನೀಡುವ ಆದೇಶವನ್ನು ಶೀಘ್ರವೇ ಜಾರಿಗೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವಂತೆ ಕಳೆದ ೩ ವರ್ಷಗಳ ಹಿಂದೆ ದೇಶದ ಘನ ನ್ಯಾಯಾಲಯವಾದ …

Read More »

ಎಸ್ಸಿ,ಎಸ್ಟಿ ಸಮುದಾಯದ ಮಿಸಲು ಹೆಚ್ಚಳಕ್ಕೆ ಆಗ್ರಹಿಸಿ ಮನವಿ

ಮೂಡಲಗಿ: ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡಗಳ ಮಿಸಲಾತಿ ಪ್ರಮಾಣ ಹೆಚ್ಚಳ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್‌ದಾಸ್ ಏಕ ಸದಸ್ಯ ಸಮಿತಿ ವರದಿ ಸಲ್ಲಿಸಿದ್ದು ಅದರ ಅನುಷ್ಟಾನಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಮಿಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾಲೂಕಾ ಘಟಕದ ಪದಾಧಿಕಾಗಳು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿ ಎರಡು ವರ್ಷಗಳಾದರೂ …

Read More »

You cannot copy content of this page