ಶುಕ್ರವಾರ , ಮಾರ್ಚ್ 29 2024
kn
Breaking News

Recent Posts

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನವಿಯ ಮೇರೆಗೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದ ಜಿಲ್ಲಾ ಸಚಿವ ಗೋವಿಂದ ಕಾರಜೋಳ

ಗೋಕಾಕ : ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಾಳೆಯಿಂದ ೫ ದಿನಗಳವರೆಗೆ ತಲಾ ೧ ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರ ಸಂಜೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ನಾಳೆಯಿಂದ ಸಾರ್ವಜನಿಕರು ಮತ್ತು ಜಾನುವಾರುಗಳಿಗಾಗಿ ಕುಡಿಯಲಿಕ್ಕೆ ನೀರನ್ನು ಬಿಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ನಾಳೆ …

Read More »

ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆ

ಮೂಡಲಗಿ: ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆತಾಲೂಕಾ ಆಡಳಿತದಿಂದ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಿಸಲ್ಲಾಯಿತು. ಹೇಮರಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಮೂಡಲಗಿ ಪುಸರಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾದ್ಯಕ್ಷೆ ರೇಣುಕಾ ಹಾದಿಮನಿ ಮತ್ತು ತಹಶೀಲ್ದಾರ ಡಿ.ಜಿ.ಮಹಾತ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯ ನಿವೃತ್ತ ಪ್ರಾದ್ಯಾಪಕ ಪ್ರೊ.ಪಿ.ಕೆ.ರಡ್ಡೇರ ಮಾತನಾಡಿ, ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮನ್ನ ಜೀವನ ಚರಿತ್ರೆ ವೈವಿದ್ಯಮಯವಾಗಿದು, ಅವಳು ಇಡಿ ಮಹಿಳಾ …

Read More »

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ

ಮೈಸೂರಿನ : ಕಿಂಗ್ಸ್ ಎಲ್ಡೆನ್ ರೆಸಾರ್ಟಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಸಲ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ ರೈತರ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದ ಮೂಡಲಗಿಯ ಯುವಕ ಮಂಜುನಾಥ …

Read More »

ಕನ್ನಡ ಮನಸ್ಸು ಒಗ್ಗೂಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತು : ಡಾ. ಮಹಾದೇವ ಜಿಡ್ಡಿಮನಿ

ಮೂಡಲಗಿ: ‘ಕನ್ನಡ ಸಾಹಿತ್ಯ ಪರಿಷತ್‌ವು ಕನ್ನಡ ಭಾಷಿಕ ಹಾಗೂ ಕನ್ನಡ ಮನಸ್ಸುಗಳನ್ನು ಒಂದುಗೂಡಿಸುವ ಮೂಲಕ ಕನ್ನಡ ನಾಡು ಕಟ್ಟುವಲ್ಲಿ ಪ್ರಮುಖ ಕಾರ್ಯಮಾಡಿದೆ’ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ ಏಕೀಕರಣದ ಹೋರಾಟಕ್ಕೆ …

Read More »

ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನ ದಿನಾಚರಣೆ ಆಚರಣೆ

ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ವು ಕನ್ನಡ ಸಾಹಿತ್ಯ ಪರಿಷತ್‌ನ ೧೦೮ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕವಿಗೋಷ್ಠಿಯನ್ನು ಮೇ ೫ರಂದು ಬೆಳಿಗ್ಗೆ ೯.೩೦ಕ್ಕೆ ಸ್ಥಳೀಯ ಶ್ರೀಪಾದಬೋಧ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿರುವರು. ಮಹಾವಿದ್ಯಾಲಯದ ಪ್ರಾಚಾರ್ಯ ಶಾನೂರಕುಮಾರ ಗಾಣಿಗೇರ ಅಧ್ಯಕ್ಷತೆವಹಿಸುವರು. ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಕಾರ್ಯಕ್ರಮ ಉದ್ಘಾಟಿಸಿವರು. ಸಾಹಿತಿ ಬಾಲಶೇಖರ ಬಂದಿ ಉಪನ್ಯಾಸ ನೀಡುವರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ. ಬಿ.ಸಿ. ಹೆಬ್ಬಾಳವಹಿಸುವರು. ಅತಿಥಿಗಳಾಗಿ ಕಸಾಪ ನಿಕಟಪೂರ್ವ ಅಧ್ಯಕ್ಷ …

Read More »

ಬಸವ ಜಯಂತಿ ಆಚರಣೆ

ಮೂಡಲಗಿ: ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ರುದ್ರಾಭೀಷೇಕ ಹಾಗೂ ಸಾಯಂಕಾಲ ೩ ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಎತ್ತುಗಳ ಮೆರವಣಿಗೆಯು ಸಕಲ ವಾದ್ಯಮೇಳದೊಂದಿಗೆ ನೆರವೇರುವುದು ಎಂದು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್ ಜಿ ಢವಳೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಗಿಡ ನೆಟ್ಟು ಕಾರ್ಮಿಕರ ದಿನಾಚರಣೆ ಆಚರಣೆ

ಮೂಡಲಗಿ: ಇಲ್ಲಿನ ಈರಣ್ಣ ನಗರದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು ೨೦ ಗಿಡ ನೆಟ್ಟು ವಿಭಿನ್ನವಾಗಿ ಕಾರ್ಮಿಕ ದಿನಾಚರಣೆ ಆಚರಿಸಿದರು ಶಿಕ್ಷಣ ಸಂಯೋಜಕ ಕರಿಬಸವರಾಜ ಅವರು ಸಸಿಗೆ ನೀರು ಉಣಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತನಂತೆ ನಿತ್ಯ ಶ್ರಮಪಡುವ ಕಾರ್ಮಿಕರ ಸೇವೆ ಅನನ್ಯವಾಗಿದೆ.ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ೫ಬಡ ನಿರ್ಗತಿಕ …

Read More »

ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ

ಮೂಡಲಗಿ: ಪರಸ್ಪರರು ಸಂಭ್ರಮದಿಂದ ರಮಜಾನ ಹಬ್ಬ ಆಚರಿಸುವುದರ ಜೊತೆಗೆ ಕಡು ಬಡವರನ್ನು ಗುರುತಿಸಿ ಅವರಿಗೆ ನೆರವು ಒದಗಿಸುವ ಕಾರ್ಯವನ್ನು ಅಂಜುಮನ್ ಎ ಇಸ್ಲಾಂ ಕಮೀಟಿಯು ಪ್ರತಿ ವರ್ಷ ಮಾಡುತ್ತಿದೆ ಎಂದು ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು. ರಮಜಾನ್ ಹಬ್ಬದ ಪ್ರಯುಕ್ತ 50 ಕಡು ಬಡವರಿಗೆ ರಮಜಾನ್ ಹಬ್ಬಕ್ಕಾಗಿಯೇ ತಯಾರಿಸಿದ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಯಾವ ಬಡವರೂ ಹಬ್ಬದ ಖುಷಿಯಿಂದ ವಂಚಿತರಾಗಬಾರದೆಂದು ಈ ಕಾರ್ಯವನ್ನು ಮಾಡಲಾಗುತ್ತಿದೆ …

Read More »

ಜವಾಹರಲಾಲ ನವೋದಯ ಪ್ರವೇಶ ಪರೀಕ್ಷೆ ನಾಳೆಯಿಂದ : ಬಿಇಒ ಅಜೀತ ಮನ್ನಿಕೇರಿ

ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಿಂದ ಕಳೇದ ವರ್ಷ …

Read More »

ಮೇ ೧ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪತ್ಥಳಿಯ ಲೋಕಾರ್ಪಣೆಯು ಮೇ ೧ರಂದು ಬೆಳಿಗ್ಗೆ ೧೦ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು. ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಕೃಪಾರ್ಶಿವಾದ ಹಾಗೂ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭವು …

Read More »

You cannot copy content of this page