ಶನಿವಾರ , ಮೇ 4 2024
kn
Breaking News

Recent Posts

ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ: ಸಂಜಯ ಯಾದಗುಡೆ

ಮೂಡಲಗಿ: ಸತತ ಪ್ರಯತ್ನ, ಶ್ರದ್ಧೆ, ಶ್ರಮ, ನಿರಂತರ ಅಧ್ಯಯನದಿಂದಾಗಿ ಯಶಸ್ಸು ಸಾಧ್ಯವಾಗುವದು. ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಶರೀರ ಕಾಯ್ದುಕೊಂಡು ಪರೀಕ್ಷೆಗಳನ್ನು ಎದುರಿಸಿ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಚಿಕ್ಕೋಡಿ ಡೈಟ್‌ನ ಹಿರಿಯ ಉಪನ್ಯಾಸಕ ಸಂಜಯ ಯಾದಗುಡೆ ಹೇಳಿದರು. ಅವರು ಬುಧವಾರ ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ಪರೀಕ್ಷೆಯ ಭಯ …

Read More »

ಶೈಕ್ಷಣಿಕ ಪ್ರಗತಿಗೆ ಸಮುದಾಯದ ಸಹಕಾರದ ಅಗತ್ಯವಿದೆ:ರಾಜಶೇಖರ ಆಡೂರು

ಕೊಪ್ಪಳ: ಶೈಕ್ಷಣಿಕ ಕ್ಷತ್ರದಲ್ಲಿ ಪ್ರಗತಿಯನ್ನು ಕಾಣಬೇಕಾದರೆ ಸಮುದಾಯದ ಸಹಕಾರದ ಅಗತ್ಯವಿದೆ ಎಂದು ನಗರಸಭೆಯ ಸದಸ್ಯರಾದ ರಾಜಶೇಖರ ಆಡೂರು ಹೇಳಿದರು. ಅವರು ಸಿ.ಪಿ.ಎಸ್.ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸರಸ್ವತಿ ಪೂಜಾ ಹಾಗೂ ೮ನೇ ತರಗತಿ ವಿದ್ಯಾರ್ಥಿಗಳಿಗೆ ಬಿಳ್ಕೋಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,ಶಿಕ್ಷಣ ಕ್ಷೇತ್ರದ ಬದಲಾವಣೆಯು ಕೇವಲ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ.ಶೈಕ್ಷಣಿಕ ಕ್ಷೇತ್ರದ ಮಹತ್ವದ ಬದಲಾವಣೆಯು ಆಗಬೇಕಾದರೆ ಅದಕ್ಕೆ ಸಮುದಾಯದ ಸಹಕಾರದ ಅಗತ್ಯವಿದೆ.ಶಿಕ್ಷಣ ಕ್ಷೇತ್ರವು ಸದಾ ಬದಲಾವಣೆಯಾಗುವ ಕ್ಷೇತ್ರವಾಗಿದೆ.ಶೈಕ್ಷಣಿಕ ಬದಲಾವಣೆಗೆ ತಕ್ಕಂತೆ ಶಿಕ್ಷಕರು ಕೂಡಾ ಬದಲಾಗಬೇಕು …

Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ದಿನಾಂಕ 15-3-2022 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಜರುಗಿತು. ಅಧ್ಯಕ್ಷರು ಎಸ್ ಆರ್ ಸೋನವಾಲ್ಕರ ಉಪಾಧ್ಯಕ್ಷರು ಎಂ ಈ ಎಸ್ ಮೂಡಲಗಿ. ಅತಿಥಿಗಳು ಡಾ. ಸಂಜಯ್ ಅಪ್ಪಯ್ಯ ಶಿಂಧಿಹಟ್ಟಿ ಅಧ್ಯಕ್ಷರು ಕ ಸಾ ಪ ಮೂಡಲಗಿ ಘಟಕ ಮಾತನಾಡಿ ಪ್ರೌಢ ವಯಸ್ಸು ಎಲ್ಲ ಸಾಧನೆಗಳಿಗೆ ಅಡಿಪಾಯ ಇದ್ದಹಾಗೆ ಸಮೂಹ ಮಾಧ್ಯಮಗಳನ್ನು ವಿವೇಕದಿಂದ ಬಳಸಬೇಕು ಈ ವಯಸ್ಸಿನಲ್ಲಿ …

Read More »

ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ : ಶೋಭಾ ಗಸ್ತಿ

ಮೂಡಲಗಿ: ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ ಎಂದು ರಾಷ್ಟಿçÃಯ ನಾರಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಹೇಳಿದರು. ಅವರು ಪಟ್ಟಣದಲ್ಲಿ ಬಿಇಒ ಕಾರ್ಯಾಲಯ, ಸರಕಾರಿ ಹೆಣ್ಣು ಮಕ್ಕಳ ಶಾಲೆ ಹಾಗೂ ಲಯನ್ಸ್ ಪರಿವಾರದಿಂದ ನಾರಿಶಕ್ತಿ ಪ್ರಶಸ್ತಿ ವಿಜೇತೆಯರಿಗೆ ಸನ್ಮಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಇನ್ಸೆçöÊರ್ಡ್ ಅವಾರ್ಡ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿರುವ ಶೋಷಿತ …

Read More »

ಮಹಿಳೆಯರ ಸಾಧನಿಯ ಕಾರ್ಯ: ಪಾರ್ವತಿ ಮಲಗೌಡರ

ಅಥಣಿ : ಮಹಿಳಾ ಸಂಘಟನೆಗಳು ಸಾಧಕ ಮಹಿಳೆಯರನ್ನು ಗುರುತಿಸಿ ಗೌರವಿಸುವ ಸಂಪ್ರದಾಯ ಇತ್ತೀಚಿನ ವರುಷಗಳಲ್ಲಿ ‘ ಮಹಿಳಾ ದಿನಾಚರಣೆ ‘ ಸಂದರ್ಭದಲ್ಲಿ ಬೆಳೆದುಕೊಂಡು ಬರುತ್ತಿರುವುದು , ನಮ್ಮ ನಡುವಿನ ಅನೇಕ ಸೂಪ್ತ ಪ್ರತಿಭೆಯ ಸಾಧಕಿಯರನ್ನು ಗುರುತಿಸಿ ಪ್ರೋತ್ಸಾಹಿ ಸ್ಪೂರ್ತಿತುಂಬುವ ಕಾರ್ಯ ವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಆಥಣಿ ಬಿಸಿಎಂ ವಿದ್ಯಾರ್ಥಿನಿಯರ ವಸತಿ ಮೇಲ್ವಿಚಾರಕಿ ಪಾರ್ವತಿ ಎಸ್ . ಮಲಗೌಡರ ನಿಲಯದ ಅಭಿಪ್ರಾಯಪಟ್ಟರು . ಅಖಿಲ ಭಾರತ ವೀರಶೈವ ಮಹಿಳಾ ಘಟಕ …

Read More »

ಚಂದ್ರವ್ವತಾಯಿ ಜಾತ್ರೆ ಆಚರಣೆ

ಹಳ್ಳೂರ: ಸ್ಥಳೀಯ ಶ್ರೀ ಚಂದ್ರವ್ವತಾಯಿ ದೇವಿಯ ಜಾತ್ರಾ ಕಾರ್ಯಕ್ರಮ ಜರುಗಿತ್ತು. ಬುಧವಾರ ಸಂಜೆ 7 ಗಂಟೆಗೆ ಚೌಡಕಿ ಪದಗಳು ಜರುಗಿದವು. ನಂತರ ಭಜನೆ, ರಾತ್ರಿ ಜಾಗರಣೆ ಕಾರ್ಯಕ್ರಮ ಜರುಗಿತ್ತು. ಗುರುವಾರ ಬೆಳಿಗ್ಗೆ 8 ಗಂಟೆಗೆ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮಾರ್ಗವಾಗಿ ಮುಖ್ಯ ರಸ್ತೆಯವರೆಗೆ ಮುತೈದೆಯರಿಂದ ಆರತಿ ಮೇಳ, ಹಾಗೂ ದೇವಿಯ ಭಾವ ಚಿತ್ರದೊಂದಿಗೆ ಮೆರವಣಿಗೆ ಸಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತ್ತು. ಮಧ್ಯಾಹ್ನ ಅನ್ನ ಪ್ರಸಾದ ಜರುಗಿತ್ತು. …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ಮೂಡಲಗಿ: ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ …

Read More »

ಶಿಕ್ಷಕರಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ರಾಷ್ಟದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ ೩೪.೮೨ ಲಕ್ಷ ರೂ.ಗಳ ಗೌರವ ವೇತನವನ್ನು …

Read More »

ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹಳ್ಳೂರ : ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.   ಶನಿವಾರ  ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ …

Read More »

ಕೃಷಿಕರ ಉಪಕಸಬುಗಳಿಗೆ ಸೂಕ್ತ ಮಾರುಕಟ್ಟೆಯ ಅವಶ್ಯಕತೆ ಒದಗಿಸಬೇಕು: ಶ್ರೀ ಬಿಳಿಯಾನಸಿದ್ಧ ಸ್ವಾಮೀಜಿ

ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು. ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕುರಿಗಾರರಿಗೆ ಸಿಗುವ ಸೌವಲತ್ತುಗಳನ್ನು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು. …

Read More »

You cannot copy content of this page