ಶುಕ್ರವಾರ , ಮೇ 3 2024
kn
Breaking News

Recent Posts

ಮೂಡಲಗಿ ಪಂಚಮಸಾಲಿ ಸಮಾಜದವರಿಂದ 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಮಾ. 6ರಂದು ಸಂಜೆ …

Read More »

ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ : ಡಿಡಿಪಿಐ ಗಜಾನನ ಮನ್ನಿಕೇರಿ

ಚಿಕ್ಕೋಡಿ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕೆಲವು ಅನುದಾನಿತ ಪ್ರೌಢ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಮಧ್ಯೆ ಒಳ್ಳೆಯ ವಾತಾವರಣವಿಲ್ಲ. ಶಿಕ್ಷಕರ ಮೇಲೆ ಮುಖ್ಯೋಪಾಧ್ಯಾಯರ ಹಿಡಿತವಿಲ್ಲದಂತಾಗಿದೆ. ಹೀಗಾಗಿ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಇಲ್ಲಿನ ಸಿ.ಬಿ.ಕೋರೆ ಸಭಾಭವನದಲ್ಲಿ ಬುಧುವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ಸಿದ್ದತೆಯ ಜಿಲ್ಲಾ ಮಟ್ಟದ …

Read More »

ಮೂಡಲಗಿ ತಾಲೂಕಾ ರಚನೆಯಲ್ಲಿ ಲೋಪ: ಲಕ್ಕಣ್ಣ ಸವಸುದ್ದಿ

ಮೂಡಲಗಿ: ಭೂಗೋಳಿಕವಾಗಿ ಮೂಡಲಗಿ ತಾಲೂಕು ರಚನೆಯಾದಾಗ ರಾಯಬಾಗ ಹಾಗೂ ಕುಡಚಿ ಮತಕ್ಷೇತ್ರದ ಸುಮಾರು 10-15 ಹಳ್ಳಿ ಜನರು ಸಂಭ್ರಮಿಸಿದರು. ಇದಕ್ಕೆ ಕಾರಣ ಆ ಊರುಗಳು ಮೂಡಲಗಿಯಿಂದ 4-6-10 ಕಿ.ಮೀ. ಒಳಗಿನ ಊರುಗಳು ರಾಜಕಾರಣಿಗಳ ಇಚ್ಛಾನುಸಾರವಾಗಿ ಈ ಊರುಗಳನ್ನು ಕೈಬಿಟ್ಟಾಗ ಜನ ಕಂಗಾಲಾದರು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು. ಅವರು ಸ್ಥಳಿಯ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೋಂದಿಗೆ ಜೊತೆ ಮಾತನಾಡುತ್ತಾ ಈಗಲೂ ಕಾಲ ಮಿಂಚಿಲ್ಲ ಜನಪ್ರತಿನಿಧಿಗಳು ರಾಜಕೀಯ ಆಟ …

Read More »

ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕ ಅವರಿಗೆ ಬಡ್ತಿ

ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಹೆಗ್ಗನಾಯಕ ಅವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಡಿ ನಾಗೇಂದ್ರ ಆದೇಶ ಹೊರಡಿಸಿದ್ದಾರೆ. ಆರ್.ಡಿ.ಪಿ.ಆರ್ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ಅವಿನಾಭಾವ ಸಂಬಂಧ ಬೆಳೆಸುವ ಮೂಲಕ ದಕ್ಷ ಅಧಿಕಾರಿಯಾಗಿ ಮೂಡಲಗಿ ಮತ್ತು ಗೋಕಾಕ ತಾ.ಪಂ ವ್ಯಾಪ್ತಿಯ …

Read More »

ಸಮಗ್ರ ಶಿಕ್ಷಣದ ಒಂದು ಭಾಗ ಕ್ರೀಡೆ – ಅಜೀತ್ ಮನ್ನಿಕೇರಿ

ಮೂಡಲಗಿ : ಕ್ರೀಡಾ ಚಟುವಟಿಕೆಗಳು ಸಮಗ್ರ ಶಿಕ್ಷಣದ ಒಂದು ಭಾಗ ಕ್ರೀಡೆಯಿಂದ ಆರೋಗ್ಯ ಸುಧಾರಿಸುತ್ತದೆ ಓದಿನಲ್ಲಿ ಆಸಕ್ತಿ ಮೂಡಿಸಲು ಕ್ರೀಡಾ ಚಟುವಟಿಕೆಗಳು ಸಹಕಾರಿ. ಉತ್ತಮ ಕಲಿಕೆಗೆ ಮಕ್ಕಳು ಆರೋಗ್ಯವಂತರಾಗಿರಬೇಕು ವಿಧ್ಯಾರ್ಥಿಗಳು ಓಧಿಗಷ್ಟೇ ಸೀಮತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿದಾಗ ಒತ್ತಡ ನಿವಾರಣೆಯಾಗುತ್ತದೆ. ಅಲ್ಲದೇ ಮಕ್ಕಳಲ್ಲಿ ಸ್ಪರ್ದಾ ಮನೋಬಾವನೆ ಮೂಡುತ್ತದೆ ಆದ್ದರಿಂದ ಶಿಕ್ಷಕರು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳಸಬೇಕೆಂದು ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಅವರು ಉಪನಿರ್ದೇಶಕರ …

Read More »

ಉಪ ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿದ ಬಸವರಾಜ ಹೆಗ್ಗನಾಯಕರಿಗೆ ಸನ್ಮಾನ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಬಸವರಾಜ ಹೆಗ್ಗನಾಯಕ ಅವರು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಅಭಿವೃದ್ದಿ)ಯಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು. ಕಾರ್ಯನಿರ್ವಾಹಕ ಹುದ್ದೆಯಿಂದ ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ದಿ.26 ರಂದು ಆದೇಶ …

Read More »

ಸಾಲಬಾದೆ ತಾಳದೆ ರೈತನೊರ್ವ ಆತ್ಮಹತ್ತೆಗೆ ಶರಣು

ರಾಮದುರ್ಗ : ಸಾಲಬಾದೆ ತಾಳದೆ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೆನ್ನಾಪೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ . ಆತ್ಮಹತ್ಯೆ ಮಾಡಿಕೊಂಡ ರೈತ ಹನಮಂತ ಯಮನಪ್ಪ ಓಗಳಾಪೂರ ( 35 ) ಎಂದು ತಿಳಿದಿದ್ದು , ಕೃಷಿ ಕೆಲಸಕ್ಕಾಗಿ ಬಟಕುರ್ಕಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನಲ್ಲಿ 70 ಸಾವಿರ , ಬಟಕುರ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 30 ಸಾವಿರ ಹಾಗೂ ಖಾಸಗಿ ಸುಮಾರು 2 …

Read More »

ಮಸಗುಪ್ಪಿ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ರೈತರ ಬದುಕು ಬಂಗಾರವಾಗಲು ಪ್ರಾರ್ಥಿಸೊಣ-ಕಡಾಡಿ

ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಕಾರಣದಿಂದ ಎಲ್ಲ ಜನ ಜೀವನ ಸ್ಥಬ್ದವಾಗಿತ್ತು. ಜಾತ್ರೆ, ಹಬ್ಬ ಹರಿದಿನಗಳು ಮಂಗಮಾಯವಾಗಿದ್ದವು, ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿದೆ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲು ನಾವೆಲ್ಲ ಶ್ರೀ ಮಹಾಲಕ್ಷ್ಮೀ ದೇವಿಗೆ ಬೇಡಿಕೊಳ್ಳಬೇಕಾಗಿದೆ ಮುಂಬರುವ ದಿನಗಳಲ್ಲಿ ರೈತರ ಬದುಕು ಬಂಗಾರವಾಗಲಿ ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಕಾರ್ತಿಕೋತ್ಸವದ ಅಂಗವಾಗಿ 2022 ರಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಲಗೋಡ ಭಾಗದ ಬಲಭೀಮ ದೇವಸ್ಥಾನವು …

Read More »

You cannot copy content of this page