ಶನಿವಾರ , ಏಪ್ರಿಲ್ 27 2024
kn
Breaking News

Recent Posts

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‌ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೆಎಂಎಫ್‌ನಿoದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ ಅವಶ್ಯವಿರುವ …

Read More »

ದೇವಿ ದರ್ಶನಕ್ಕಾಗಿ ವಿಕಲಚೇತನರ ಪ್ರತ್ಯೇಕ ಪ್ರವೇಶ ದ್ವಾರದ ನಿರ್ವಹಣೆ ಅಳಿಸಿ ಹೋದ ನಾಮಫಲಕವನ್ನು ಅಳವಡಿಸಿ : ಬೀರಪ್ಪ ಅಂಡಗಿ

ಕೊಪ್ಪಳ: ಜಿಲ್ಲೆಯ ಪ್ರಸಿದ್ದ ದೇವಸ್ಥಾನವಾದ ಹುಲಿಗೇಮ್ಮ ದೇವಿ ದರ್ಶನಕ್ಕಾಗಿ ಬರುವ ವಿಕಲಚೇತನರಿಗೆ ಅವರಿಗಾಗಿ ಮೀಸಲಿರಿಸಿದ ಪ್ರತ್ಯೇಕ ಪ್ರವೇಶ ದ್ವಾರದ ಸರಿಯಾದ ನಿರ್ವಹಣೆ ಹಾಗೂ ಅಳಿಸಿ ಹೋದ ನಾಮಫಲಕವನ್ನು ಪುನ: ಹಾಕುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹುಲಿಗೇಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಕ ಅಧಿಕಾರಿಗಳಾದ ಅರವೀಂದ ಸುತಗೊಂಡ ಅವರಿಗೆ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಮಾತನಾಡುತ್ತಾ,ರಾಜ್ಯ ಹಾಗೂ ಕೇಂದ್ರ …

Read More »

ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸಫರ್ಮ‌ರ ದುರಸ್ಥಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸಫರ್ಮ‌್ರನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರು ಘಟನೆ ಗುರುವಾರ ಸಂಜೆ ಜರುಗಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸಫಾರ್ಮರನಲ್ಲಿ (ಟಿ.ಸಿ) ದುರಸ್ತಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (೩೮) ಟ್ರಾನ್ಸಫಾರ್ಮರ್ ಮೇಲೆಯೇ ಸಾವನ್ನಪಿದು. ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, ಆದರೆ ಏಕಾಏಕಿ ವಿದ್ಯುತ್ …

Read More »

ಐಸಿಐಸಿ ಬ್ಯಾಂಕಿನಿoದ ರೈತ ಸಮುದಾಯಕ್ಕೆ ಅನುಕೂಲವಾಗಲಿದೆ-ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಐಸಿಐಸಿಐ ಬ್ಯಾಂಕ್ ಭಾರತದ ದೊಡ್ಡ ೪ ಬ್ಯಾಂಕುಗಳಲ್ಲಿ ಒಂದಾಗಿದ್ದು, ಮೂಡಲಗಿ ತಾಲ್ಲೂಕು ಪ್ರದೇಶದಲ್ಲಿ ಈ ಬ್ಯಾಂಕ್ ನ ಶಾಖೆಯನ್ನು ತೆರೆದಿರುವುದು ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಸೊನವಾಲ್ಕರ ಕಟ್ಟಡದಲ್ಲಿ ಆರಂಭವಾಗಿರುವ ಐಸಿಐಸಿಐ ಬ್ಯಾಂಕ್‌ನ್ನು ಗುರುವಾರದಂದು ಉದ್ಘಾಟಿಸಿ ಮಾತನಾಡಿದ ಅವರು, ಈ ಬ್ಯಾಂಕಿನಿoದ ಗ್ರಾಹಕರಿಗೆ ಒಳ್ಳೆಯದಾಗಬೇಕು. ಅದರಲ್ಲೂ ರೈತ ಸಮುದಾಯಕ್ಕೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು …

Read More »

ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ಸಂಘಟನಾ ಕಾರ್ಯದರ್ಶಿಯಾಗಿ ಅರವಿಂದ ದಳವಾಯಿ

ಮೂಡಲಗಿ: ರಾಜ್ಯದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು,ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ೭೫ನೇ ವರ್ಷದ ಜನ್ಮದಿನದ ನಿಮಿತ್ಯ ಅಮೃತ ಮಹೋತ್ಸವವನ್ನು ಅ.೩ರಂದು ೧೧ ಗಂಟೆಗೆ ದಾವಣಗೆರೆ ನಗರದಲ್ಲಿ ಆಚರಣೆ ಮಾಡಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮ ಸಂಘಟಿಸಲು ರಚಿಸಲಾದ ರಾಜ್ಯಮಟ್ಟದ …

Read More »

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿ

ಮೂಡಲಗಿ: ಮುಂಬೈನಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿ ಮಾಡಿ ಶುಭಕೋರಿದರು. ಈ ಸಮಯದಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವಿನ ಸಂಬoಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚಿಸಲಾಯಿತು. ಹಾಗೂ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ಹರಿಬಿಡುವ ನೀರಿನ ಪ್ರಮಾಣದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

Read More »

ಕಿನ್ನಾಳ ಕಲೆಯ ಜೊತೆಗೆ ಕಲಾವಿದರೂ ಬೆಳೆಯಬೇಕು – ಪಿ.ಜಿ.ಆರ್. ಸಿಂಧ್ಯಾ

. ಕೊಪ್ಪಳ : ಕಿನ್ನಾಳ ಕಲೆ ಎಂಬುದು ವಿಜಯನಗರ ಸಾಮ್ರಾಜ್ಯದ ಕಾಲದಿಂದ ಇಂದಿನವರೆಗೂ ಕೊಂಚವೂ ಬದಲಾಗದೇ ತನ್ನ ಮೂಲ ಸ್ವರೂಪವನ್ನೇ ಉಳಿಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಇದೊಂದು ಅಪರೂಪದ ಕಲೆಯಾಗಿದ್ದು ಜಗತ್ಪಪ್ರಸಿದ್ಧವಾದುದಾಗಿದೆ.ವಿಜಯನಗರ ಸಾಮ್ರಾಜ್ಯ ಅಳಿದಮೇಲೆ ಅಲ್ಲಿಂದ ಪಲಾಯನ ಮಾಡಿದ ಹಲವರಲ್ಲಿ ಕೆಲ ಕಲಾವಿದರು ಕಿನ್ನಾಳಿಗೆ ವಲಸೆ ಬಂದರು. ಹಾಗೆ ಬಂದವರಲ್ಲಿ ಸಂಜೀವಪ್ಪರೆAಬುವರು ಒಬ್ಬರು. ಇಲ್ಲಿಯ ದೇಸಾಯಿಯವರ ಆಶ್ರಯ ದೊರೆತು ಇಲ್ಲಿಯೇ ನೆಲೆ ನಿಂತರು. ಹೀಗೆ ಕಿನ್ನಾಳಿಗೆ ಬಂದ ಈ ಕಲಾವಿದರು …

Read More »

ಸೇವಾ ಮನೋಭಾವದ ಸ್ಕೌಟ್ಸ್ ಮತ್ತು ಗೈಡ್ಸ್ ತ್ಯಾಗದ ಮತ್ತೊಂದು ಶಬ್ಧ : ಪಿ.ಜಿ.ಆರ್.ಸಿಂಧ್ಯಾ

ಕೊಪ್ಪಳ: ಸೇವಾ ಮನೋಭಾನೆಯಿಂದ ಶ್ರಮಿಸುತ್ತಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ತ್ಯಾಗದ ಮತ್ತೊಂದು ಶಬ್ದವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಪ್ರಧಾನ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಅವರು ಹೇಳಿದರು. ಕೊಪ್ಪಳ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಕೊಪ್ಪಳ ಸಂಸ್ಥೆಯ ಸಹಯೋಗದಲ್ಲಿ ಭಾಗ್ಯನಗರದ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಬುಧವಾರದಂದು ಆಯೋಜಿಸಲಾಗಿದ್ದ “ಜಿಲ್ಲಾ ಮಟ್ಟದ ಸಮಾವೇಶ’’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು …

Read More »

ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ: ಜಾರಕಿಹೊಳಿ

ಮೂಡಲಗಿ: ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ, ಸ್ವ-ಸಹಾಯ ಸಂಘಗಳನ್ನು ಕಿರು ಉದ್ಯಮಿಗಳನ್ನಾಗಿಸುವ ಅಮೃತ ಯೋಜನೆ ಅಡಿ ೪೫ ಸಂಘಗಳಿಗೆ ತಲಾ ಒಂದು ಲಕ್ಷ ರೂ ಗಳಂತೆ ಸಹಾಯ ಧನವನ್ನು ನೀಡಲಾಗುತ್ತಿದ್ದು, ಈ ಸಹಾಯ ಧನವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸುವಂತೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಸಂಘಗಳಿಗೆ ಕರೆ ನೀಡಿದರು. ಬುಧವಾರದಂದು ಪಟ್ಟಣದ ಗುಡ್ಲಮಡ್ಡಿ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಪದಗ್ರಹಣ ಸಮಾಜ ಸೇವೆಯಲ್ಲಿ ನಿಸ್ವಾರ್ಥತೆ ಇರಲಿ : ಮಠಪತಿ

ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಶರಣ ಐ.ಆರ್. ಮಠಪತಿ ಹೇಳಿದರು. ಇಲ್ಲಿಯ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೨೦೨೨-೨೩ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಗೆ ನಿತ್ಯ ಸಾಕಷ್ಟು ಅವಕಾಶಗಳಿದ್ದು, ಪ್ರತಿಯೊಬ್ಬರಲ್ಲಿ ಸಮಾಜ ಸೇವೆ ಮಾಡುವ ಇಚ್ಛಾಶಕ್ತಿ ಇರಬೇಕು ಎಂದರು. ಮೂಡಲಗಿ ಲಯನ್ಸ್ ಕ್ಲಬ್‌ದವರು …

Read More »

You cannot copy content of this page