ಗುರುವಾರ , ಏಪ್ರಿಲ್ 25 2024
kn
Breaking News

ಚಂದ್ರವ್ವತಾಯಿ ಜಾತ್ರೆ ಆಚರಣೆ

Spread the love

ಹಳ್ಳೂರ: ಸ್ಥಳೀಯ ಶ್ರೀ ಚಂದ್ರವ್ವತಾಯಿ ದೇವಿಯ ಜಾತ್ರಾ ಕಾರ್ಯಕ್ರಮ ಜರುಗಿತ್ತು. ಬುಧವಾರ ಸಂಜೆ 7 ಗಂಟೆಗೆ ಚೌಡಕಿ ಪದಗಳು ಜರುಗಿದವು. ನಂತರ ಭಜನೆ, ರಾತ್ರಿ ಜಾಗರಣೆ ಕಾರ್ಯಕ್ರಮ ಜರುಗಿತ್ತು. ಗುರುವಾರ ಬೆಳಿಗ್ಗೆ 8 ಗಂಟೆಗೆ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮಾರ್ಗವಾಗಿ ಮುಖ್ಯ ರಸ್ತೆಯವರೆಗೆ ಮುತೈದೆಯರಿಂದ ಆರತಿ ಮೇಳ, ಹಾಗೂ ದೇವಿಯ ಭಾವ ಚಿತ್ರದೊಂದಿಗೆ ಮೆರವಣಿಗೆ ಸಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತ್ತು. ಮಧ್ಯಾಹ್ನ ಅನ್ನ ಪ್ರಸಾದ ಜರುಗಿತ್ತು.

ಈ ಸಂದರ್ಭದಲ್ಲಿ ಹಿಬ್ಬಾಳಟ್ಟಿಯ ಸದಾಸಿವ ಮಠದ ಸಿದ್ದಲಿಂಗಯ್ಯ ಹಿರೇಮಠ ಸ್ವಾಮಿಜಿಗಳು ಆಶೀರ್ವಚನ ನೀಡಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ:- ಪ್ರವೀಣ ಮಾ ಮಾವರಕರ


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page