ಶುಕ್ರವಾರ , ಮಾರ್ಚ್ 29 2024
kn
Breaking News

ವಿಕಲಚೇತನ ನೌಕರರಿಗೆ ಮನೆಯಿಂದಲೇ ಕೆಲಸ : ಬೀರಪ್ಪ ಅಂಡಗಿ ಚಿಲವಾಡಗಿ.

Spread the love

ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.
ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ ವಿಕಲಚೇತನ ನೌಕರರು ಕಚೇರಿಗೆ ಹೋಗಲು ತೊಂದರೆಯಾಗಬಾರ ದೆಂದು ಸರಕಾರ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದಾರೆ.ಈ ಆದೇಶ ವು ಶಿಕ್ಷಕರು ಸೇರಿದಂತೆ ಎಲ್ಲಾ ಇಲಾಖೆಯ ವಿಕಲ ಚೇತನ ನೌಕರರಿಗೆ ಅನ್ವಯ ಆಗಲಿದೆ ಎಂದರು.
ಪ್ರಸ್ತುತವಾಗಿ ಜೂನ್ 30 ರವರೆಗೆ ಮಾತ್ರ ಮನೆ ಯಿಂದಲೇ ಕೆಲಸ ಮಾಡಲು ಆದೇಶವಾಗಿದ್ದು ಮುಂದಿನ ವಾರದಲ್ಲಿ ಆದೇಶ ಮುಂದುವರೆಯುವ ಸಾಧ್ಯತೆ ಇದೇ ಎಂದು ತಿಳಿಸಿದ್ದಾರೆ. ಆದ್ದರಿಂದ ವಿಕಲ ಚೇತನ ನೌಕರರು ಯಾವುದೇ ಗೊಂದಲಕ್ಕೆ ಒಳಗಾಗದೆ ಇರುವ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page