ಮೂಡಲಗಿ: ಭಾರತ ಸರಕಾರದ ಕೃಷಿ ಮಂತ್ರಾಲಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳಾದ ಡಾ. ಅಶೋಕ ದಳವಾಯಿಯವರಿಗೆ ಗದಗನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ವಿಸ್ವವಿದ್ಯಾಲಯ ದಿಂದ ಏ. 10 ರಂದು ಪ್ರಥಮ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಿದ್ದಾರೆ.
ದಳವಾಯಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿಶ್ವ ವಿದ್ಯಾಲಯವು ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 2017 ರಲ್ಲಿ ದಾರವಾಡ ಕೃಷಿ ವಿಶ್ವ ವಿದ್ಯಾಲಯ ಘಟಿಕೋತ್ಸವದಲ್ಲಿ ಆಡಳಿತ, ಕೃಷಿ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೆಟ್ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಅರ್ಥಶಾಸ್ತ್ರ ವಿಷಯದ ಕುರಿತು ಪ್ರಬಂಧ ಮಂಡಿಸಿ ಡಾರವಾಡ ದ ಕರ್ನಾಟಕ ವಿಶ್ವವಿದ್ಯಾಲಯ 2005 ರಲ್ಲಿ ಡಾಕ್ಟರೆಟ್ ಪ್ರಶಸ್ತಿ ಪಡೆದಿರುತ್ತಾರೆ.
