ಭಾನುವಾರ , ಮೇ 28 2023
kn
Breaking News

ಚರಂಡಿ, ಉದ್ಯಾನವನ ನಿರ್ಮಿಸಲು ಆಗ್ರಹಿಸಿ ಮನವಿ

Spread the love

ಮೂಡಲಗಿ – ನಗರದ ರಿ ಸ ನಂ. ೫೪೦/೧೧ ರಲ್ಲಿ ರಸ್ತೆ, ಚರಂಡಿ ಹಾಗೂ ಉದ್ಯಾನವನವನ್ನು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ ನಾಗರಿಕರು ಪುರಸಭೆಗೆ ಮನವಿ ಸಲ್ಲಿಸಿದ್ದಾರೆ.

ಅನಾರೋಗ್ಯದಿಂದ ಗೈರು ಹಾಜರಾಗಿರುವ ಮುಖ್ಯಾಧಿಕಾರಿಯವರ ಬದಲಿಗೆ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿರುವ ನಾಗರಿಕರು ೧೯೯೦-೨೦೦೦ ರಲ್ಲಿ ಟೌನ್ ಪ್ಲಾನಿಂಗ್ ಆಗಿರುವ ರಿ. ಸ ನಂ ೫೪೦/ ೧೧ ರಲ್ಲಿ ಸರಿಯಾದ ರಸ್ತೆ ಇಲ್ಲ,ಚರಂಡಿ ಮೇಲ್ಸೇತುವೆ ಕಟ್ಟಲಾಗಿದೆ ಆದರೆ ಅದು ನಾಲ್ಕು ಅಡಿ ಎತ್ತರವಾಗಿದೆ, ಪಾರ್ಕ್ ಸ್ಥಾಪನೆಗೆ ಜಾಗ ಬಿಡಲಾಗಿದೆ ಆದರೆ ಪಾರ್ಕ್ ಆಗಿಲ್ಲ ಇವುಗಳನ್ನು ಮಾಡಬೇಕೆಂದು ಕಳೆದ ಇಪ್ಪತ್ತು ವರ್ಷಗಳಿಂದಲೂ ಬೇಡಿಕೆ ಇಟ್ಟಿದ್ದರೂ ಪುರಸಭೆಯವರು ಮಾಡುತ್ತಿಲ್ಲ ಕಾರಣ ರಸ್ತೆ, ಚರಂಡಿ ಹಾಗೂ ಪಾರ್ಕ್ ಗಳನ್ನು ಬೇಗನೆ ಮಾಡಿಕೊಡಬೇಕು ಎಂದು ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ತಮ್ಮ ಬೇಡಿಕೆಯನ್ನು ಬೇಗನೆ ಈಡೇರಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ನಾಗರಿಕರು ಎಚ್ಚರಿಸಿದ್ದಾರೆ.

ಸೋಮೇಶ ಹಿರೇಮಠ, ಸುರೇಶ ನಿಡಗುಂದಿ, ಸುನೀಲ ನಿಡಗುಂದಿ, ರಾಜು ಹಂಚಿನಾಳ, ಶ್ರೀಧರ ಪತ್ತಾರ, ರಾಜಶ್ರೀ ನಿಡಗುಂದಿ,ಸರಸ್ವತಿ ನಿಡಗುಂದಿ, ಮಹಾದೇವಿ ಪಾಟೀಲ, ಲಕ್ಷ್ಮೀ ಮುನ್ಯಾಳ, ಶೋಭಾ ಪಾಟೀಲ, ಶ್ರೀಶೈಲ ಪಾಟೀಲ, ಎನ್ ಆಯ್ ಯಕ್ಕುಂಡಿ ಇದ್ದರು


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page