ಬುಧವಾರ , ಮೇ 31 2023
kn
Breaking News

ಅನ್ನದಾನವು ಶ್ರೇಷ್ಠ ದಾನವಾಗಿದೆ: ಬಸವಣ್ಣಿ ಮುಗಳಖೋಡ

Spread the love


ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ೭೩ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು.
ಮೂಡಲಗಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಬಸವಣ್ಣಿ ಮುಗಳಖೋಡ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು.
ಲಯನ್ಸ್ ಕ್ಲಬ್‌ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಲಯನ್ಸ್ ಕ್ಲಬ್ ಸದಸ್ಯ ವೆಂಕಟೇಶ ಪಾಟೀಲ ಅವರು ತಮ್ಮ ಅಜ್ಜ ದಿ. ನಿಂಗಪ್ಪ ರಂಗಪ್ಪ ಸೋನವಾಲಕರ ಅವರ ಸ್ಮರಣಾರ್ಥವಾಗಿ ಅನ್ನದಾಸೋಹವನ್ನು ಏರ್ಪಡಿಸಿದ್ದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿ ಪ್ರತಿ ತಿಂಗಳದಲ್ಲಿ ಎರಡು ಬಾರಿ ಅನ್ನದಾಸೋಹವನ್ನು ನಡೆಸಿಕೊಂಡು ಬರುತ್ತಿರುವೆವು, ಲಯನ್ಸ್ ಕ್ಲಬ್ ಸದಸ್ಯರಲ್ಲದೆ ಬೇರೆಯವರು ಸಹ ಅನ್ನದಾಸೋಹವನ್ನು ಮಾಡಬಹುದಾಗಿದೆ. ದಾಸೋಹದ ನಿರ್ವಹಣೆಯನ್ನು ಲಯನ್ಸ್ ಕ್ಲಬ್‌ವು ಮಾಡುವುದು ಎಂದರು.

ಮುಖ್ಯ ಅತಿಥಿಯಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಕುರುಹಿನಶೆಟ್ಟಿ ಕೋ.ಆಪ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ರಮೇಶ ಒಂಟಗೋಡಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ. ಪ್ರಕಾಶ ನಿಡಗುಂದಿ, ಸಂಜಯ ಮೋಕಾಶಿ, ಪುಲಕೇಶ ಸೋನವಾಲಕರ, ಡಾ. ಸಚಿನ ಟಿ, ಮಹಾಂತೇಶ ಹೊಸೂರ, ಶಿವಾನಂದ ಕಿತ್ತೂರ ಇದ್ದರು.
೩೫೦ಕ್ಕೂ ಅಧಿಕ ಸಂಖ್ಯೆಯಲ್ಲಿ ಅನ್ನದಾಸೋಹದಲ್ಲಿ ಭಾಗವಹಿಸಿದ್ದರು.
ಕಾರ್ಯದರ್ಶಿ ಡಾ. ಸಂಜಯ ಶಿಂಧಿಹಟ್ಟಿ ನಿರೂಪಿಸಿದರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page