ಭಾನುವಾರ , ಮೇ 28 2023
kn
Breaking News

ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಿ -ತಹಶೀಲ್ದಾರ ಡಿ ಜಿ ಮಹಾತ

Spread the love

ಮೂಡಲಗಿ: ಪಟ್ಟಣ ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು ಜುಲೈ ೧೦ ರಂದು ಆಚರಿಸುವ ಬಕ್ರೀದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಶಾಂತಿಯುತವಾಗಿ ಆಚರಿಸಬೇಕು ಎಂದು ತಹಸೀಲ್ದಾರ ಡಿ ಜಿ ಮಹಾತ ಹೇಳಿದರು.
ಗುರುವಾರ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಬಕ್ರೀದ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಹಬ್ಬ ಆಚರಣೆ ಹಾಗೂ ಕಾನೂನು ಪಾಲನೆ ಎಲ್ಲರ ಹೊಣೆಯಾಗಿದ್ದು ಪರಸ್ಪರರು ಸಹೋದರತೆಯಿಂದ ಬಕ್ರೀದ ಆಚರಿಸಬೇಂದು ಹೇಳಿದರು.
ಸಿಪಿಐ ಶ್ರೀಶೈಲ್ ಬ್ಯಾಕೂಡ ಮಾತನಾಡಿ, ಯಾವುದೆ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಕಾನೂನು ಪಾಲನೆಯೊಂದಿಗೆ ಬಕ್ರೀದ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸುವಂತೆ ಸಲಹೆ ನೀಡಿದರು.
ಪಶು ವೈದ್ಯಾಧಿಕಾರಿ ಬಿ ಎಸ್ ಗೌಡರ ಸರ್ಕಾರದ ನಿಯಮಾವಳಿಗಳನ್ನು ವಿವರಿಸಿ ಮಾತನಾಡಿದರು.
ಪಿಎಸ್‌ಐ ಎಚ್ ವೈ ಬಾಲದಂಡಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ,ವಂದಿಸಿದರು.
ತಾಲೂಕಾ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಎಮ್ ಬಿ ವಿಭೂತಿ, ಪುರಸಭೆ ಆರೋಗ್ಯ ನಿರೀಕ್ಷಕ ಚಿದಾನಂದ ಮುಗುಳಖೋಡ, ಶಿಕ್ಷಣ ಸಂಯೋಜಕರಾದ ಸತೀಶ ಬಿ ಎಸ್ ವೇದಿಕೆಯಲ್ಲಿದ್ದರು.
ಮುಖಂಡರಾದ ಹಸನಸಾಬ ಮುಗುಟಖಾನ, ರವೀಂದ್ರ ಸಣ್ಣಕ್ಕಿ, ಅಜೀಜ ಡಾಂಗೆ, ಮಲೀಕ ಕಳ್ಳಿಮನಿ, ಮಲೀಕ ಹುಣಶ್ಯಾಳ, ಇರ್ಶಾದ ಪೀರಜಾದೆ, ಸುರೇಶ ಸಣ್ಣಕ್ಕಿ, ಇಮಾಮಹುಸೇನ ಮುಲ್ಲಾ, ಸಲೀಂ ಇನಾಮದಾರ, ಲಾಲಸಾಬ ಸಿದ್ದಾಪೂರ, ಮಲೀಕಸಾಬ ಪಾಶ್ಚಾಪೂರ, ಹುಸೇನಸಾಬ ತುಂಬಗಿ, ಶಕೀಲ ಬೇಪಾರಿ ಸೇರಿದಂತೆ ಮುಸ್ಲಿಂ ಸಮಾಜದ ಅನೇಕ ಮುಖಂಡರು ಇದ್ದರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page