ಮೂಡಲಗಿ: ರಾಜ್ಯದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು,ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ೭೫ನೇ ವರ್ಷದ ಜನ್ಮದಿನದ ನಿಮಿತ್ಯ ಅಮೃತ ಮಹೋತ್ಸವವನ್ನು ಅ.೩ರಂದು ೧೧ ಗಂಟೆಗೆ ದಾವಣಗೆರೆ ನಗರದಲ್ಲಿ ಆಚರಣೆ ಮಾಡಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮ ಸಂಘಟಿಸಲು ರಚಿಸಲಾದ ರಾಜ್ಯಮಟ್ಟದ ಅಮೃತ ಮಹೋತ್ಸವ ಸಮಿತಿಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್ ಮುಖಂಡರಾದ ಅರವಿಂದ್ ದಳವಾಯಿಯವರನ್ನು ನೇಮಿಸಲಾಗಿದೆ. ಈ ಕಾರ್ಯಕ್ರಮ ಕುರಿತಂತೆ ಬೆಳಗಾವಿ ಜಿಲ್ಲೆಯಲ್ಲಿ ಸಂಘಟನೆ ಮಾಡುವ ಜವಾಬ್ದಾರಿಯನ್ನು ದಳವಾಯಿಯವರಿಗೆ ವಹಿಸಲಾಗಿದೆ.
