ಶುಕ್ರವಾರ , ಮಾರ್ಚ್ 29 2024
kn
Breaking News

೭೫ ನೇ ಸ್ವಾತಂತ್ರೋತ್ಸವದ ನಿಮಿತ್ಯ ವಿವಿಧ ಕಾರ್ಯಕ್ರಮ

Spread the love

ಮೂಡಲಗಿ: ಅರಭಾವಿ ಕಾಂಗ್ರೆಸ್ ಸೇವಾದಳ ಮತ್ತು ಕೌಜಲಗಿಯ ಸಿಂಧೂತಾಯಿ ಮಹಾದೇವರಾವ್ ದಳವಾಯಿ ಎಜ್ಯುಕೇಶನ್ ಟ್ರಸ್ಟ, ಇವುಗಳ ಸಹಭಾಗಿತ್ವದಲ್ಲಿ ೭೫ ನೇ ಸ್ವಾತಂತ್ರೋತ್ಸವ ನಿಮಿತ್ಯ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೇಸ ಮುಖಂಡ ಅರವಿಂದ ದಳವಾಯಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ಜರುಗಲಿವೆ.
ಅಗಷ್ಟ ೪ ರಂದು ಗೋಕಾಕ ಮತ್ತು ಮೂಡಲಗಿ ವಲಯದ ಫ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಭಂದ ಮತ್ತು ಭಾಷಣ ಸ್ಪರ್ದೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಸ್ವಾತಂತ್ರ್ಯ ಸಂಗ್ರಾಮ ಕುರಿತಂತೆ ವಿವಿಧ ವಿಷಯಗಳ ಕುರಿತು ತಮ್ಮ ವಿಚಾರಗಳನ್ನು ಪ್ರಸ್ತುತಪಡಿಸುವರು. ಅಗಷ್ಟ ೯ ರಂದು ಕೌಜಲಗಿಯ ಡಾ. ಎಮ್.ಎಮ್.ದಳವಾಯಿ ಪ್ರೌಢಶಾಲೆ ಆವರಣದಲ್ಲಿ ಅಗಷ್ಟ ಕ್ರಾಂತಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಅನೇಕ ಬುದ್ದಿ ಜೀವಿಗಳು, ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಹೋರಾಟಗಾರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಯೋಧರು, ಮಾಜಿ ಸೈನಿಕರು, ಆದರ್ಶ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವದು. ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಗುವದು. ಅಗಷ್ಟ ೧೨ ರಂದು ಕೌಜಲಗಿಯಿಂದ ಮೂಡಲಗಿ ಪಟ್ಟಣದ ವರೆಗೆ ಸುಮಾರು ೩೦ ಕಿ.ಮೀ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ ರಾಜಕೀಯ ಕಾರ್ಯಕರ್ತರು, ವಿದ್ಯಾರ್ಥಿಗಳು, ಕಲಾವಿದರು, ರೈತರು ಮತ್ತು ಸಾಮಾಜಿಕ ಕಾರ್ಯಕರ್ತರು ಭಾಗವಹಿಸುತ್ತಾರೆ. ಅಗಷ್ಟ ೧೫ ರಂದು ಕೆಪಿಸಿಸಿಯವರು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯ ನಡಿಗೆ ಮತ್ತು ಇತರ ಕಾರ್ಯಕ್ರಮಗಳಲ್ಲಿ ಅರಭಾವಿ ಮತಕ್ಷೇತ್ರದ ಸುಮಾರು ೫೦೦ ಜನ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page