ಶುಕ್ರವಾರ , ಮಾರ್ಚ್ 29 2024
kn
Breaking News

ಮೊಹರಂ ಹಬ್ಬದ ಪ್ರಯುಕ್ತ ಕರ್ಬಲ್ ಮತ್ತು ರಿವಾಯತ್ ಪದಗಳು

Spread the love

ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಮಂಗಳವಾರ ಸಾಯಂಕಾಲ ಮೊಹರಮ್ ಹಬ್ಬದ ಪ್ರಯುಕ್ತ ವಿವಿಧ ಜಾನಪದ ತಂಡಗಳಿoದ ಕರ್ಬಲ್ ಮತ್ತು ರಿವಾಯತ್ ಪದಗಳ ಹಾಗೂ ಭಜಂತ್ರಿ ಕಲಾವಿದರಿಂದ ಶಹನಾಯಿ ವಾದನ ಕಾರ್ಯಕ್ರಮ ಜರುಗಿತು.

ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ. ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ ಹಾಡುಗಳ ಸ್ಪರ್ದೆಯಲ್ಲಿ ಮೂಡಲಗಿಯ ಎರಡು ಹಾಗೂ ಹುಣಶ್ಯಾಳ ಗ್ರಾಮದ ಎರಡು ತಂಡಗಳು ಭಾಗವಹಿಸಿ ಬೀಬಿ ಫಾತಿಮಾ,ಹಸೇನ ಹುಸೇನ ಕುರಿತು ಬೀಬಿ ಫಾತಿಮಾನ ಕತಿ ಕೇಳರಿ ಕುಂತ ಎoಬ ವಿವಿಧ ಕರ್ಬಲ್,ರಿವಾಯತ್ ಪದಗಳನ್ನು ಹಾಡಿದರು. ಹುಣಶ್ಯಾಳ ಪಿ ಜಿ ಗ್ರಾಮದ ನನ್ನುಸಾಬ ನದಾಫ್ ಮತ್ತು ಕಾಲೇಸಾಬ ತಂಡದ ಕಲಾವಿದರು ಹಾಡಿದ ಹಾಡುಗಳು ಜನಮನ ಸೆಳೆದವು ಸಹ ಕಲಾವಿದರಾದ ಮರಮಸಾಬ ಗದ್ಯಾಳ,ಹಗಣುಸಾಬ ಶೇಖ ಗದ್ಯಾಳ,ಕಾಲೆಸಾಬ ಹುಣಶ್ಯಾಳ,ಹಾಜಿಸಾಬ ಹುಣಶ್ಯಾಳ, ಮಹ್ಮದ ಹುಣಶ್ಯಾಳ, ಚುಟುಕುಸಾಬ ಜಾತಗಾರ(ಮಂಟೂರ) ಹುಣಶ್ಯಾಳ ತಂಡದ ನನ್ನುಸಾಬ ನದಾಫ ಶಂಕರ ಸುಣಗಾರ, ಇಸ್ಮಾಯಿಲ್ ನದಾಫ, ಅಪ್ಪಯ್ಯಾ ಸುಂಕದ, ಮಗತುಮಸಾಬ ನದಾಫ, ನಾಗಪ್ಪ ರವಳೋಜಿ, ರಾಮಸಿದ್ದ ಜಂಗಟಿ, ಲಗಪ್ಪ ನನ್ನಾರಿ, ಬಸವರಾಜ ನನ್ನಾರಿ ಇವರು ಹಾಡಿ ಪ್ರೋತ್ಸಾಹಧನ ಪಡೆದರು.
ಈ ಸಮಯದಲ್ಲಿ ಮುಖಂಡರಾದ ಮಹ್ಮದಸಾಬ ಮುಲ್ಲಾ (ಶೇಗುಣಸಿ), ಕಲ್ಲಪ್ಪ ಗೌನಾಳಿ, ಪಾಂಡುರoಗ ಕಲಾಲ, ವಿಜಯ ಗೋಣಿ ಹಾಗೂ ಗ್ರಾಮದ ಅನೇಕ ಭಕ್ತರು ಇದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page