ಬುಧವಾರ , ಮೇ 31 2023
kn
Breaking News

ಕಳಪೆ ಬೀಜ, ರಸಗೋಬ್ಬರದ ಕೊರತೆಗಳ ಬಗ್ಗೆ ದೂರು ಬಂದಲ್ಲಿ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು: ಎಲ್.ಐ.ರೂಡಗಿ

Spread the love

ಮೂಡಲಗಿ: ಮುಂಗಾರು ಹಂಗಾಮು ಮಳೆ ಬೇಗ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವ ಹಿನ್ನಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ಬೀಜ, ರಸಗೋಬ್ಬರ ಹಾಗೂ ಕೀಟನಾಶಕಗಳನ್ನು ಸರ್ಮಪಕವಾಗಿ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ನಿಗದಿತ ದರಕ್ಕೆ ಮುಟ್ಟುವಂತೆ ಏರ್ಪಾಟು ಮಾಡಿಕೊಳ್ಳಲು ಕೃಷಿ ಇಲಾಖೆಯ ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಅವರು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು.

ಶನಿವಾರದಂದು ಘಟಪ್ರಭಾ, ರಾಜಾಪೂರ, ನಾಗನೂರ, ಹಾಗೂ ಮೂಡಲಗಿ ಪಟ್ಟಣ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಬೇಟಿ ನೀಡಿ ಮಾತನಾಡಿ, ಸದರಿ ಹಂಗಾಮಿನಲ್ಲಿ ರೈತರಿಂದ ಕಳಪೆ ಬೀಜ, ರಸಗೋಬ್ಬರದ ಕೊರತೆಗಳ ಬಗ್ಗೆ ದೂರು ಬಂದಲ್ಲಿ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಕೃಷಿ ಪರಿಕರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.

ರಾಜಾಪೂರ ಹಾಗೂ ನಾಗನೂರ ರೈತ ಉತ್ಪಾದಕ ಸಂಸ್ಥೆಗಳಿಗೆ ಬೇಟಿ ನೀಡಿ ಕಾರ್ಯವನ್ನು ಪರಿಶೀಲಿಸಿದರು.
ಈ ಸಮಯದಲ್ಲಿ ಸಹಾಯಕ ಕೃಷಿ ನಿರ್ದೇಶಕ ಎಮ್.ಎಮ್.ನದಾಫ್, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಾದ ಶಂಕರ ಹಳದಮನಿ, ಪರಸಪ್ಪ ಹುಲಗಬಾಳಿ, ಸಹಾಯಕ ಕೃಷಿ ಅಧಿಕಾರಿ ವಿ.ಬಿ.ಬೀರಾಜ, ವಿ.ಜಿ.ಮೇತ್ರಿ, ವಿ.ಟಿ.ಸನದಿ ಹಾಗೂ ಆತ್ಮಾ ಸಿಬ್ಬಂದಿ ಪೂಣ ್ಮಾ ಒಡ್ರಾಳೆ ಮತ್ತಿತರರು ಇದ್ದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page