ಶುಕ್ರವಾರ , ಮಾರ್ಚ್ 29 2024
kn
Breaking News

ಮಹಿಳೆಯರ ಅವಮಾನ, ಖಂಡನಾರ್ಹ : ಯುವ ಮುಖಂಡ ಈಶ್ವರ ಢವಳೇಶ್ವರ

Spread the love

ಮೂಡಲಗಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಶ್ರೀಗಳಿಂದ ಅಖಂಡ 36 ದಿನಗಳವರೆಗೆ ಪಾದಯಾತ್ರೆ, ಬೃಹತ್ ಸಮಾವೇಷ, ಧರಣಿ ಸತ್ಯಾಗ್ರಹ ಹೀಗೆ ನಾನಾ ತರಹದ ಹೋರಾಟದ ಮೂಲಕ ಮೀಸಲಾತಿಗಾಗಿ ಹಕ್ಕೊತ್ತಾಯಕ್ಕಾಗಿ ಮನವಿ ಮಾಡಿಕೊಂಡರೂ ಸರಕಾರ ಇನ್ನೂವರೆಗೆ ಯಾವುದೆ ಭರವಸೆ ಕೂಡ ನೀಡದಿರುವುದು ವಿಷಾದನೀಯ ಹಾಗೂ ಮೀಸಲಾತಿಗಾಗಿ ನಡೆದ ಹೋರಾಟಗಳಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಅಭಿವೃದ್ದಿ ಸಮಿತಿ ಯುವ ಮುಖಂಡ ಈಶ್ವರ ಢವಳೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ದಿನಾಚರಣೆಯಂದು ಚನ್ನಮ್ಮ ಬಳಗದ ರಾಜ್ಯಧ್ಯಕ್ಷೆ ವೀಣಾ ಕಾಶಪ್ಪನವರ ಹಾಗೂ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಈ ಹೋರಾಟದ ಕುರಿತು ಮಹಿಳಾ ನಿಯೋಗವು ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ 2ಎ ಮೀಸಲಾತಿ ನೀಡುವಂತೆ ಮನವಿ ಸಲ್ಲಿಸಲು ತೆರಳಿದ ಸಮಯದಲ್ಲಿ ಅವರನ್ನು ಬಂಧಿಸಿ ಬಿಡುಗಡೆಗೊಳಿಸಿ ದೌರ್ಜನ್ಯ ಎಸಗಿದ ಘಟನೆ ಹೋರಾಟ ಹತ್ತಿಕ್ಕುವಂತ ಕಾರ್ಯವಾಗಿದೆ ಹಾಗೂ ಸ್ರೀ ಕುಲಕ್ಕೆ ಅವಮಾನ ಮಾಡಿದಂತಾಗಿದೆ ಮಹಿಳೆಯರಿಗೆ ಗೌರವ ನೀಡದ ಸರಕಾರಕ್ಕೆ ಮುಂದಿನ ದಿನಮಾನದಲ್ಲಿ ತಕ್ಕ ಪಾಠ ಕಲಿಸುತ್ತೇವೆ ನಡೆದ ಘಟನೆಯನ್ನು ಮೂಡಲಗಿ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮೀತಿಯು ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page